Monday, July 27, 2026
Monday, July 27, 2026

Karnataka State Industrial and Infrastructure Corporation Board ಕೆಎಸ್ಐಡಿಸಿ ಅಧ್ಯಕ್ಷರಿಂದ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ

Date:

Karnataka State Industrial and Infrastructure Corporation Board ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ) ಅಧ್ಯಕ್ಷರಾದ ನಂಜಯ್ಯ ಮಠ ರವರು ಶಿವಮೊಗ್ಗ ನಗರ ವಿಮಾನ ನಿಲ್ದಾಣದಲ್ಲಿ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.
ಶಿವಮೊಗ್ಗ ನಗರಕ್ಕೆ ಆಗಮಿಸಿ,ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ತಿಂಗಳ 7 ಮತ್ತು 8 ರಂದು ತಾವು ಮತ್ತೊಮ್ಮೆ ಆಗಮಿಸಲಿದ್ದು ಅದರೊಳಗಾಗಿ ನೈಟ್ ಲ್ಯಾಂಡಿಂಗ್ ಕಾಮಗಾರಿ ಸಂಪೂರ್ಣ ಗೊಳಿಸಬೇಕೆಂದು ಕಾಮಗಾರಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗುತ್ತಿಗೆದಾರರಿಗೆ ಸೂಚಿಸಿದರು.
ಜೂನ್ ತಿಂಗಳ ಮೊದಲನೇ ವಾರದಲ್ಲಿ ನೈಟ್ ಲ್ಯಾಂಡಿಂಗ್ ಕಾಮಗಾರಿ ಪೂರ್ಣಗೊಳ್ಳಲಿದೆ ಎಂಬ ಭರವಸೆಯನ್ನು ಅಽಕಾರಿಗಳು ನೀಡಿದರು. ಇದರ ಜೊತೆಗೆ ಇಂಡಿಗೋ ವಿಮಾನ ಸಂಸ್ಥೆ ಪ್ರಯಾಣವನ್ನು ನಿಲ್ಲಿಸಿರುವುದು ಈ ನೈಟ್ ಲ್ಯಾಂಡಿಂಗ್ ವಿಚಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ, ನೈಟ್ ಲ್ಯಾಂಡಿಂಗ್ ಕಾಮಗಾರಿಗೆ ಸಂಪೂರ್ಣ ರಾಜ್ಯ ಸರ್ಕಾರವೇ ಹಣವನ್ನು ನೀಡಿದ್ದು, ಇಂಡಿಗೋ ವಿಮಾನವು ಕೇಂದ್ರ ಸರ್ಕಾರದ ಅಸ್ತಿತ್ವದಲ್ಲಿರುವುದರಿಂದ ಪೈಲೆಟ್‌ಗಳ ಕೊರತೆಯಿಂದ ಚಾಲನೆ ಯನ್ನು ನಿಲ್ಲಿಸಿರುತ್ತದೆ ಎಂದು ಅವರು ಹೇಳಿದರು.
Karnataka State Industrial and Infrastructure Corporation Board ಶಿವಮೊಗ್ಗ ನಗರದಲ್ಲಿ ನೈಟ್ ಲ್ಯಾಂಡಿಂಗ್ ವಿಚಾರವಾಗಿ ಹಲವು ವರದಿಗಳು ಬಂದಿದ್ದವು. ಈ ಸಂಬಂಧ ನೈಟ್ ಲ್ಯಾಂಡಿಂಗ್ ಚಾಲನೆಗೆ ಇಂಡಿಗೋ ವಿಮಾನ ಸಂಸ್ಥೆ ಹಾಗೂ ಇನ್ನುಳಿದ ಅನೇಕ ವಿಮಾನ ಸಂಸ್ಥೆ ಗಳೊಂದಿಗೆ ಚರ್ಚಿಸಿ ಶಿವಮೊಗ್ಗ ನಗರಕ್ಕೆ ವಿಮಾನದ ಸೂಕ್ತ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್

Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ...

Klive Special Article ತೆರಿಗೆಯು ಜೇನ್ನೊಣವು ಹೂವಿನಿಂದ ಜೇನು ಸಂಗ್ರಹಿಸುವಂತೆ ಇರಬೇಕು

ವಿಶೇಷ ಲೇಖನ: ಆರ್.ಮನೋಹರ್.ತೆರಿಗೆ ಸಲಹೆಗಾರ. ಶಿವಮೊಗ್ಗ. Klive Special Article ಆದಾಯ ತೆರಿಗೆ...

S.N. Channabasappa ನೀಟ್ ಹೆಸರಿನಲ್ಲಿನ ಕಾನೂನು ಭಂಜಕರನ್ನ ಜೈಲಿಗಟ್ಟುವ ಧೈರ್ಯವಿಲ್ಲದ ಗೃಹಸಚಿವ ಪ್ರಿಯಾಂಕ ಖರ್ಗೆ- ಶಾಸಕ ಚೆನ್ನಿ ಆಕ್ರೋಶ

S.N. Channabasappa "ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ನೀಟ್...