Thursday, August 6, 2026
Thursday, August 6, 2026

B.Y. Raghavendra ಸಂಘಟನೆಯನ್ನ ಬಲಪಡಿಸಲು ಪಕ್ಷದ ಗೆಲುವು ಹೊಸ ಸ್ಫೂರ್ತಿ ನೀಡಿದೆ- ಬಿ.ವೈ.ರಾಘವೇಂದ್ರ.

Date:

B.Y. Raghavendra ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯು ಅಭೂತಪೂರ್ವ ಯಶಸ್ಸನ್ನು ಸಾಧಿಸಿರುವ ಹಿನ್ನೆಲೆಯಲ್ಲಿ, ಇಂದು ಶಿವಮೊಗ್ಗದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ವಿಜಯೋತ್ಸವದ ಸಂಭ್ರಮಾಚರಣೆಯಲ್ಲಿ ಶಿವಮೊಗ್ಗ ಸಮನಸದ ಬಿ.ವೈ.ರಾಘವೇಂದ್ರ ಪಾಲ್ಗೊಂಡಿದ್ದರು.

ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ದಕ್ಷ ನಾಯಕತ್ವ ಮತ್ತು ಅಭಿವೃದ್ಧಿ ಮಂತ್ರಕ್ಕೆ ಜನರು ನೀಡಿರುವ ಈ ಭರ್ಜರಿ ಬೆಂಬಲವು ಪ್ರಜಾಪ್ರಭುತ್ವದ ವಿಜಯವಾಗಿದೆ ಎಂದು ಬಿ.ವೈ.ರಾಘವೇಂದ್ರ ಈ ಸಂದರ್ಭದಲ್ಲಿ ಹೇಳಿದರು.

ಈ ವಿಜಯೋತ್ಸವದಲ್ಲಿ ಜಿಲ್ಲೆಯ ಮುಖಂಡರು ಹಾಗೂ ನೂರಾರು ಉತ್ಸಾಹಿ ಕಾರ್ಯಕರ್ತರೊಂದಿಗೆ
ಸಂಸದರು ಸಿಹಿ ಹಂಚಿ, ಪಟಾಕಿ ಸಿಡಿಸಿ ಜಯಘೋಷಗಳೊಂದಿಗೆ ಸಂಭ್ರಮವನ್ನು ಹಂಚಿಕೊಂಡರು.

B.Y. Raghavendra ಈ ಗೆಲುವು ಮುಂಬರುವ ದಿನಗಳಲ್ಲಿ ನಮ್ಮ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಜನಸೇವೆಯಲ್ಲಿ ತೊಡಗಿಸಿಕೊಳ್ಳಲು ನಮಗೆ ಹೊಸ ಸ್ಫೂರ್ತಿಯನ್ನು ನೀಡಿದೆ. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಭಾರತಕ್ಕೆ ಈ ಫಲಿತಾಂಶವು ಹೊಸ ಚೈತನ್ಯ ತುಂಬಿದೆ ಎಂದು ಬಿ.ವೈ.ರಾಘವೇಂದ್ರ ಹೆಮ್ಮೆಯಿಂದ ಮಾತನಾಡಿದರು.

ಈ ಸಂಭ್ರಮದಲ್ಲಿ ಜಿಲ್ಲಾ ಅಧ್ಯಕ್ಷರು ಜಗದೀಶ್, ಶಿವಮೊಗ್ಗ ನಗರದ ಶಾಸಕರಾದ ಎಸ್. ಏನ್. ಚೆನ್ನಬಸಪ್ಪ ಸೇರಿದಂತ ಪ್ರಮುಖ ಜನಪ್ರತಿನಿಧಿಗಳು ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...