Thursday, August 6, 2026
Thursday, August 6, 2026

Sri Sri Prasannanatha Swamiji ಪ್ರವಾಸ ಮತ್ತು ಕ್ರೀಡಾಚಟುವಟಿಕೆಗಳಿಂದ ಜೀವನೋತ್ಸಾಹ ವೃದ್ಧಿ- ಶ್ರೀಪ್ರಸನ್ನನಾಥಶ್ರೀ

Date:

Sri Sri Prasannanatha Swamiji ಪ್ರವಾಸ ಮಾಡುವುದರಿಂದ ಹೊಸ ಪ್ರಾಕೃತ್ತಿನ ಸಂಪತ್ತಿನ ಪರಿಚಯ ಆಗುವುದರ ಜೊತೆಯಲ್ಲಿ ಜೀವನೋತ್ಸಾಹ ವೃದ್ಧಿಸುತ್ತದೆ ಎಂದು ಶ್ರೀ ಪ್ರಸನ್ನನಾಥ ಸ್ವಾಮೀಜಿ ಹೇಳಿದರು.

ಚುಂಚಾದ್ರಿ ಮೀನು ಅಭಿವೃದ್ಧಿ ಮತ್ತು ಜಲ ಕ್ರೀಡೆ ಸಂಸ್ಥೆ ವತಿಯಿಂದ ನೂತನ ಬೋಟ್ ಹೌಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿ, ಪ್ರವಾಸದಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ ಎಂದು ತಿಳಿಸಿದರು.

ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಮೋಹನ್ ಅವರು ವಿಶೇಷ ಪ್ರಯತ್ನ ಮಾಡಿರುವುದು ಶ್ಲಾಘನೀಯ ಎಂದು ಹೇಳಿದರು.

ಶಿವಮೊಗ್ಗ ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ಕುಟುಂಬದವರೆಲ್ಲ ಇಂತಹ ಜಲ ಕ್ರೀಡಾ ಕಾರ್ಯಕ್ರಮಗಳಿಗೆ ಭಾಗವಹಿಸಬೇಕು ಎಂದು ತಿಳಿಸಿದರು.

Sri Sri Prasannanatha Swamiji ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಪ್ರವಾಸ ಮತ್ತು ಸಾಹಸ ಕ್ರೀಡೆಗಳಿಗೆ ಶಿವಮೊಗ್ಗ ಜಿಲ್ಲೆ ಮನೆ ಮಾತಾಗಿದೆ. ಸಭೆ ಸಮಾರಂಭ, ಕಾರ್ಯಕ್ರಮಗಳನ್ನು ಮಾಡಲು ಹಾಗೂ ಮನರಂಜನೆಯಲ್ಲಿ ತೊಡಗಿಸಿಕೊಳ್ಳಲು ಉತ್ತಮವಾದ ವ್ಯವಸ್ಥೆ ಇದೆ ಎಂದು ಹೇಳಿದರು.

ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಮಾತನಾಡಿ, ಮೋಹನ್ ಅವರು ಪ್ರತಿ ಬಾರಿ ಹೊಸ ಹೊಸ ಆಲೋಚನೆಗಳನ್ನು ಮಾಡುತ್ತ ಇಂತಹ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ. ಈ ರೀತಿ ಕಾರ್ಯಗಳು ಸ್ವಲ್ಪ ಕಷ್ಟವಾಗುತ್ತದೆ ಎಂದು ತಿಳಿಸಿದರು.

ಮೋಹನ್ ಮಾತನಾಡಿ, ಸಾರ್ವಜನಿಕರಿಗೆ ಸಾಹಸ ಕ್ರೀಡೆಗಳು, ಜಲ ಕ್ರೀಡೆಗಳು ಮತ್ತು ಈ ರೀತಿಯ ಚಟುವಟಿಕೆಗಳ ಪರಿಚಯ ಜೊತೆಗೆ ಮನರಂಜನೆ ಹಾಗೂ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶವಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...