Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ, ತೀವ್ರವಾದ ಶಾಖದ ಹೊಡೆತದಿಂದ (ಹೀಟ್ ವೇವ್) ಜಾನುವಾರುಗಳ ಆರೋಗ್ಯ ಮತ್ತು ಹಾಲಿನ ಉತ್ಪಾದನೆಯ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಲು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಅವರು ಪಶುಪಾಲಕರಿಗೆ ಕೆಲವು ಸರಳ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲು ಕೋರಿದ್ದಾರೆ.
ಮಧ್ಯಾಹ್ನದ ರಕ್ಷಣೆ: ಕಡು ಬಿಸಿಲಿರುವ ಮಧ್ಯಾಹ್ನದ ಸಮಯದಲ್ಲಿ ಜಾನುವಾರುಗಳಿಗೆ ಒದ್ದೆಯಾದ ಗೋಣಿ ಚೀಲಗಳನ್ನು ಹೊದಿಸುವುದು ಉತ್ತಮ.
Summer ಕೊಟ್ಟಿಗೆಯ ನಿರ್ವಹಣೆ: ಜಾನುವಾರುಗಳ ಕೊಟ್ಟಿಗೆಯ ಮೇಲ್ಛಾವಣಿಗೆ ಸುಣ್ಣದ ಲೇಪನ ಮಾಡುವುದರಿಂದ ಅಥವಾ ತೆಂಗಿನ ಗರಿಗಳನ್ನು ಹೊದಿಸುವುದರಿಂದ ತಾಪಮಾನವನ್ನು ಕಡಿಮೆ ಮಾಡಬಹುದು.
ನೀರಿನ ಲಭ್ಯತೆ: ಜಾನುವಾರುಗಳಿಗೆ ಯಾವಾಗಲೂ ಕುಡಿಯಲು ಸ್ವಚ್ಛ ಮತ್ತು ತಂಪಾದ ನೀರಿನ ವ್ಯವಸ್ಥೆ ಇರಲಿ.
ದೇಹ ತಂಪಾಗಿಸುವುದು: ಜಾನುವಾರುಗಳ ಮೈಮೇಲೆ ನೀರನ್ನು ಸಿಂಪಡಿಸುವ ವ್ಯವಸ್ಥೆ ಮಾಡಬೇಕು ಹಾಗೂ ಸೊಳ್ಳೆ/ಕೀಟಗಳ ಬಾಧೆ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು.
ಪೌಷ್ಟಿಕ ಆಹಾರ: ಜಾನುವಾರುಗಳಿಗೆ ರಸಮೇವು, ಪೌಷ್ಟಿಕ ಆಹಾರ ಮತ್ತು ಅಗತ್ಯ ಪೋಷಕಾಂಶಗಳ ಪೂರಕಗಳನ್ನು ನೀಡಬೇಕು.
ನೆರಳಿನ ವ್ಯವಸ್ಥೆ: ಸಾಧ್ಯವಾದಷ್ಟು ಮಧ್ಯಾಹ್ನದ ವೇಳೆ ಜಾನುವಾರುಗಳನ್ನು ಬಿಸಿಲಿಗೆ ಬಿಡದೆ, ಮರಗಳ ಕೆಳಗೆ ತಂಪಾದ ನೆರಳಿನಲ್ಲಿ ಇರುವಂತೆ ನೋಡಿಕೊಳ್ಳಬೇಕು.
ರೈತರು ಈ ಮೇಲಿನ ಕ್ರಮಗಳನ್ನು ಪಾಲಿಸುವ ಮೂಲಕ ಬೇಸಿಗೆಯ ಅವಧಿಯಲ್ಲಿ ತಮ್ಮ ಜಾನುವಾರುಗಳ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.
Date:
