ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ಎಪಿಎಂಸಿ ಮುಂಭಾಗದ ಅಂಗಡಿಯಲ್ಲಿ ಬೆಂಕಿ ಅವಘಡ ನಡೆದಿದೆ.
ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆದಿದ್ದು ಬಾಳೆಬೈಲು ಸಮೀಪದ ಫುಡ್ ಪಾಯಿಂಟ್ ಹಾಗೂ ಪಕ್ಕದ ಕಟಿಂಗ್ ಶಾಪ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.
