Friday, May 8, 2026
Friday, May 8, 2026

JCI Shimoga Malnad ಬೇಸಿಗೆ ನೀರಿನ ಬೇಗೆ ನೀಗಲುಜೆಸಿಐ ಭಾವನಾ ದಿಂದ ಹಕ್ಕಿಗಳಿಗೆ ನೀರುಣಿಸುವ ಚಟುವಟಿಕೆ- ಪೂರ್ಣಿಮಾ ಸುನೀಲ್.

Date:

JCI Shimoga Malnad ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆಯು ನಿರಂತರ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದ್ದು, ಸಂಸ್ಥೆಯ ಸಮಾಜಮುಖಿ ಕಾರ್ಯ ಅರ್ಥಪೂರ್ಣ ಎಂದು ಜೆಸಿಐ ಸಂಸ್ಥೆಯ ಜಡ್‌ವಿಸಿ ಪೂರ್ಣಿಮಾ ಸುನೀಲ್ ಹೇಳಿದರು.

ಜೆಸಿಐ ಶಿವಮೊಗ್ಗ ಭಾವನಾದ ಅಲೂಮ್ನಿ ಕ್ಲಬ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಜನಸಂಖ್ಯೆ ಹೆಚ್ಚಾದಂತೆ ಪ್ರಕೃತಿಯ ಮೇಲಿನ ಕಾಳಜಿಯು ಕಡಿಮೆಯಾಗುತ್ತಿದೆ. ಮಲೆನಾಡು ಶಿವಮೊಗ್ಗ ಅತಿ ಹೆಚ್ಚು ಬಿಸಿಲು ಹೊಂದಿದ ಜಿಲ್ಲೆಗಳಲ್ಲಿ ಒಂದಾಗುತ್ತಿದೆ. ಇಂತಹ ಬಿಸಿಲ ಬೇಗೆಯಿಂದ ಸುಡುತ್ತಿರುವ ಮೂಕ ಪಕ್ಷಿಗಳನ್ನು ಕೇಳುವವರಿಲ್ಲ. ಇದಕ್ಕಾಗಿ ಜೆಸಿಐ ಸಂಸ್ಥೆ ಹಕ್ಕಿಗಳಿಗೆ ತಮ್ಮದೇ ಮನೆಯ ತಾರಸಿ ಮೇಲೆ ಆಗಿರಬಹುದು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಆಗಿರಬಹುದು. ಹಕ್ಕಿಗಳು ಅತಿ ಹೆಚ್ಚು ಇರುವ ಸ್ಥಳಗಳಲ್ಲಿ ನೀರು ಸಿಗುವಂತೆ ಮಾಡುವ ವಿಶೇಷ ಕಾರ್ಯಕ್ರಮ ರೂಪಿಸಿದೆ ಎಂದು ತಿಳಿಸಿದರು.

JCI Shimoga Malnad ಜೆಸಿಐ ಸಂಸ್ಥೆಯು ತನ್ನದೇ ಆದ ರೀತಿಯಲ್ಲಿ ಸಮಾಜ ಸೇವೆ ಮಾಡುತ್ತಾ ಬಂದಿದ್ದು, ಇತ್ತೀಚೆಗೆ ಹಕ್ಕಿಗಳಿಗೆ ನೀರುಣಿಸಲು ಅನುಕೂಲವಾಗುವ ವ್ಯವಸ್ಥೆ ಮಾಡಲಾಯಿತು ಎಂದರು.

ಜೆಸಿಐ ಸಂಸ್ಥೆಯ ಜಡ್‌ವಿಸಿ ಉದಯ್ ಕಡಂಬ, ಕೋಆರ್ಡಿನೇಟರ್ ದಿವ್ಯಾ, ಸುರೇಖಾ ಮುರುಳಿಧರ್, ಜೆಸಿಐ ಶಿವಮೊಗ್ಗ ಭಾವನದ ಅಧ್ಯಕ್ಷೆ ಕರಿಬಸಮ್ಮ, ಜೆಸಿಐ ಶಿವಮೊಗ್ಗ ವಿವೇಕ್ ಅಧ್ಯಕ್ಷೆ ವಿಜಯಲಕ್ಷ್ಮೀ ಉದಯ್ ಹಾಗೂ ಎಲ್ಲ ಸದಸ್ಯರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...