Thursday, June 25, 2026
Thursday, June 25, 2026

Karnataka Sanga ಭಾರತ, ಕರ್ನಾಟಕದ ತದ್ವಿರುದ್ಧವಲ್ಲ ತಾಯಿ-ಮಗಳ ಹಾಗೆ- ಡಾ.ಟಿ.ಎಲ್.ಪ್ರವೀಣ್

Date:

Karnataka Sanga ಕುವೆಂಪು ಅವರ ಸಾಹಿತ್ಯದಲ್ಲಿನ ರಾಷ್ಟ್ರೀಯತೆಯನ್ನು ಮರೆಮಾಚಿದ್ದೇವೆ. ಭಾರತ, ಕರ್ನಾಟಕ ತದ್ವಿರುದ್ಧವಲ್ಲ, ತಾಯಿ-ಮಗಳ ಹಾಗೆ ಎಂಬುದು ಕುವೆಂಪು ಅವರ ಸಾಹಿತ್ಯದಲ್ಲಿ ನೋಡಬಹುದು ಎಂದು ದಾವಣಗೆರೆ ವಿಶ್ವವಿದ್ಯಾಲಯದ ಸಹಪ್ರಾಧ್ಯಾಪಕ ಡಾ.ಟಿ.ಎಲ್. ಪ್ರವೀಣ್ ಹೇಳಿದರು.

ಶಿವಮೊಗ್ಗ ನಗರದ ಕರ್ನಾಟಕ ಸಂಘದಲ್ಲಿ ಅಭಿವ್ಯಕ್ತಿ ಟ್ರಸ್ಟ್ ವತಿಯಿಂದ ಶಿವಮೊಗ್ಗ ಸಾಹಿತ್ಯ ಹಬ್ಬ ಮೊದಲ ಆವತ್ತಿಯ ಎರಡನೇ ದಿನದ ಮೊದಲ ಗೋಷ್ಠಿಯಲ್ಲಿ ಭಾನುವಾರ ಕುವೆಂಪು ಸಾಹಿತ್ಯದಲ್ಲಿ ರಾಷ್ಟ್ರೀಯತೆ ಹಾಗೂ ಪ್ರಾದೇಶಿಕತೆಯ ಸಮನ್ವಯತೆ ಕುರಿತು ಸಂವಾದಕಾರರಾಗಿ ಪಾಲ್ಗೊಂಡು ಮಾತನಾಡಿದರು.
ಭಾರತದ ಸ್ವಾತಂತ್ರ್ಯ ಹಾಗೂ ಕರ್ನಾಟಕದ ಅಸ್ಮಿತೆಗೆ ಹೋರಾಟ ನಡೆಯುತ್ತಿದ್ದ ಕಾಲಘಟ್ಟ ಕುವೆಂಪು ಅವರದ್ದು. ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ ಎಂಬ ಅವರ ಸಾಲುಗಳೆ ಭಾರತ, ಕರ್ನಾಟಕ ತದ್ವಿರುದ್ಧವಲ್ಲ ಎಂಬ ನಿಲುವು ತೋರಿಸಿದೆ ಎಂದರು.

ಭಾರತದ ಐಕ್ಯತೆಗೆ ಅತ್ಯಂತ ಮುಖ್ಯವೆಂದು ಹೇಳಿದರು. ಕನ್ನಡಕ್ಕಾಗಿ ಕೈಎತ್ತಿ ಎಂದು ಹೇಳುವವರು ಮುಂದಿನದ್ದು ಭಾರತ ಎಂಬುದನ್ನು ಮರೆಯುತ್ತಿದ್ದಾರೆ, ಇದು ವಿಷಾದನೀಯ. ಕನ್ನಡಿಗ, ಭಾರತೀಯ ಎಂಬ ವಿಷಯ ಮುಖಾಮುಖಿ ಮಾಡುವ ಸಂದರ್ಭವೇ ಇಲ್ಲ. ಅದೊಂದು ವಿಭಜಿಸುವ ತಂತ್ರ, ಅದು ಬಾಲಿಶವಾದದು. ವೇದ, ಉಪನಿಷತ್ತುಗಳ ಮೂಲಕ ನಾವು ಇಲ್ಲಿಯವರೆಗೂ ಐಕ್ಯತೆ ಸಾಧಿಸುತ್ತಾ ಬಂದಿದ್ದೇವೆ ಅದರ ಮೂಲಕವೇ ನಾವು ಸಾಗಬೇಕು ಎಂದರು.

1960ರ ನಂತರದಲ್ಲಿ ಸೆಕ್ಯುಲರ್ ರಾಜಕೀಯದಡಿ ಕನ್ನಡ ಬೌದ್ಧಿಕ ಜಗತ್ತು ಅಸ್ಥಿತ್ವ ಕಾಣುವ ಸಂದರ್ಭದಲ್ಲಿ ಕುವೆಂಪು ಅವರ ಸಾಹಿತ್ಯವನ್ನು ಸೀಮಿತಗೊಳಿಸಿದರು. ಭಾರತೀಯ ಸಂಸ್ಕೃತಿಯಲ್ಲಿ ಮೌಢ್ಯವಿದೆ ಎಂಬ ಸೆಕ್ಯುಲರ್‌ವಾದದ ಚಿಂತನೆಯ ವಿಚಾರವನ್ನ ಮಾತ್ರ ಮುಂದೆ ತರಲಾಯಿತು. ಆದರೆ ಕುವೆಂಪು ಅವರ ವೈಚಾರಿಕತೆಯೇ ಅದರಿಂದ ಭಿನ್ನವಾಗಿತ್ತು, ಮುನ್ನೆಲೆಗೆ ಬರಲೇ ಇಲ್ಲ ಎಂದರು.
ಸೈದ್ಧಾಂತಿಕವಾಗಿ ಕುವೆಂಪು ಅವರ ವಿಚಾರವನ್ನು ಮುನ್ನಲೆಗೆ ತರುವ ಕೆಲಸ ಆಗಬೇಕು. ಆಗ ಭಾರತದ ಅಸ್ಮಿತೆ ಎಲ್ಲರನ್ನೂ ತಲುಪುವುದು. ಆಸುರಿ ಸಾಹಿತ್ಯ, ದೈವೀ ಸಾಹಿತ್ಯ ಎಂಬುದರ ಸ್ಪಷ್ಟನೆ ಕೊಟ್ಟವರು ಕುವೆಂಪು ಅವರು ಅದನ್ನು ತಿಳಿದು ಸಾಗೋಣ ಎಂದು ಕರೆ ನೀಡಿದರು.

ಬೆಂಗಳೂರಿನ ಸಹಪ್ರಾಧ್ಯಾಪಕಿ ಡಾ. ಅಶ್ವಿನಿ ದೇಸಾಯಿ ಮಾತನಾಡಿ, ಕುವೆಂಪು ಅವರದ್ದು ಭಾರತ ಒಗ್ಗೂಡಿಸುವ ಕಾಲಘಟ್ಟ. ಯುರೋಪಿಯನ್, ಕಲೋನಿಯಲ್ ವಿಚಾರ ತಿರಸ್ಕರಿಸಿ ಭಾರತದ ರಾಷ್ಟ್ರೀಯತೆ ಮುಂದಿಡುವ ಪ್ರಯತ್ನವನ್ನು ಕುವೆಂಪು ಹಾಗೂ ಮಾಸ್ತಿ ಅವರು ಮಾಡಿದರು ಎಂದು ತಿಳಿಸಿದರು.

Karnataka Sanga ರಾಷ್ಟ್ರೀಯತೆಯ ಕಲ್ಪನೆ ತಿಳಿಸುವ ಕೆಲಸ ಸ್ವಾತಂತ್ರ್ಯದ ಸಂದರ್ಭದಲ್ಲಿ ಸಾಹಿತಿಗಳಿಗಿತ್ತು. ಅಜ್ಞಾನ ತೊರೆದು ಜ್ಞಾನದೆಡೆಗೆ ಸಾಗಿ ಎಂಬುದು ಕುವೆಂಪು ಸಾಹಿತ್ಯದಲ್ಲಿದೆ. ಸಂಸ್ಕೃತಿಯ ಹಿನ್ನೆಲೆಯ ದೃಷ್ಟಿಯಲ್ಲಿ ರಾಷ್ಟ್ರೀಯತೆ ಕಟ್ಟಿಕೊಳ್ಳಲು ಕುವೆಂಪು ಸಾಹಿತ್ಯ ಓದಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮನ್ವಯಕಾರರಾದ ರೋಹಿತ್ ಚಕ್ರತೀರ್ಥ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...