ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಜಯದ ಘೋಷಣೆ ಮೊಳಗಿಸಿ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಜನಾಭಿಮಾನದಿಂದ ಭರ್ಜರಿ ವಿಜಯ ಸಾಧಿಸಿದ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಮಂತ್ರಿ ಶ್ರೀನರೇಂದ್ರಮೋದಿ ಅವರಿಗೆ ಕರ್ನಾಟಕದ ಸಮಸ್ತ ಜನತೆಯ ಪರವಾಗಿ ಅಭಿಮಾನಪೂರ್ವಕ ಸನ್ಮಾನ ಸಲ್ಲಿಸಲಾಯಿತು.
ವಿಶ್ವದ ವೇದಿಕೆಯಲ್ಲಿ ಭಾರತದ ಸಾಮರ್ಥ್ಯ, ಸಂಸ್ಕೃತಿ ಮತ್ತು ಸ್ವಾಭಿಮಾನವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುತ್ತಿರುವ ದೂರದೃಷ್ಟಿಯ ನನಾಯಕತ್ವ, “ವಿಕಸಿತ ಭಾರತ”ದ ಸಂಕಲ್ಪವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ದೇಶವನ್ನು ದಿಟ್ಟ ಹೆಜ್ಜೆಗಳಲ್ಲಿ ಮುನ್ನಡೆಸುತ್ತಿರುವ ಆದರಣೀಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಜನತೆ ಮತ್ತೊಮ್ಮೆ ಬೆಂಬಲದ ಮುದ್ರೆ ಒತ್ತಿದ್ದಾರೆ.
