Thursday, June 25, 2026
Thursday, June 25, 2026

B. S. Yediyurappa ಅಭಿಮಾನೋತ್ಸವ ಆಚರಿಸಿದ ಅಭಿಮಾನಿಗಳಿಗೆ ಹಿರಿಯ ರಾಜಕಾರಣಿ “ಬಿಎಸ್ ವೈ” ಅವರಿಂದ ಧನ್ಯತೆ ಅರ್ಪಣೆ

Date:

B. S. Yediyurappa ಜನರ ಪ್ರೀತಿ, ಅಭಿಮಾನಿಗಳಿಂದ ಹೃದಯ ತುಂಬಿದೆ. ಕಳೆದ ಐದು ದಶಕಗಳ ನನ್ನ ಪ್ರಾಮಾಣಿಕ ಹೋರಾಟ, ಜನಸೇವೆಗಳನ್ನು ಗಮನಿಸಿ, ಅಭಿನಂದಿಸಿ, ಆಶೀರ್ವದಿಸಲು ಬೃಹತ್ ಅಭಿನಂದನೋತ್ಸವವನ್ನು ಅರ್ಥಪೂರ್ಣವಾಗಿ ಆಯೋಜಿಸಿ, ನನ್ನ ನಿರೀಕ್ಷೆಯನ್ನೂ ಮೀರಿ ಯಶಸ್ವಿಗೊಳಿಸಿದ ಲಕ್ಷ ಲಕ್ಷ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪನವರು ಹೇಳಿದ್ದಾರೆ.

ತಮ್ಮ ಬಿಡುವಿಲ್ಲದ ಕಾರ್ಯಗಳ ಒತ್ತಡದ ನಡುವೆಯೂ ಆಗಮಿಸಿ ಶುಭ ಹಾರೈಸಿದ ಕೇಂದ್ರ ಗೃಹ ಸಚಿವ ಶ್ರೀ Amit Shah ಜೀ ಅವರಿಗೆ, ನನ್ನನ್ನು ಆಶೀರ್ವದಿಸಿ ಹರಸಲು ದಿವ್ಯ ಸಾನ್ನಿಧ್ಯ ವಹಿಸಿದ್ದ ನಾಡಿನ ಎಲ್ಲ ಪರಮಪೂಜ್ಯ ಸ್ವಾಮೀಜಿಗಳಿಗೆ, ಹರ ಗುರು ಚರ ಮೂರ್ತಿಗಳಿಗೆ, ಪಕ್ಷದ ಎಲ್ಲಾ ನಾಯಕರಿಗೆ, ಜನಪ್ರತಿನಿಧಿಗಳಿಗೆ, ಸಂಘಟಕರಿಗೆ ಹಾಗೂ ಎಲ್ಲಾ ನಮ್ಮ ನಿಷ್ಠಾವಂತ ಕಾರ್ಯಕರ್ತರಿಗೆ ನಾನು ಸದಾ ಆಭಾರಿಯಾಗಿದ್ದೇನೆ ಎಂದಿದ್ದಾರೆ.

ನನ್ನಲ್ಲಿ ಶಕ್ತಿ ಇರುವವರೆಗೂ, ನನ್ನ ಕೊನೆಯ ಉಸಿರಿರುವವರೆಗೂ, ಪಕ್ಷ ಸಂಘಟನೆಗೆ, ನಾಡು ನುಡಿಯ, ನಾಡಿನ ಜನರ ಸೇವೆಗೆ ನನ್ನ ಪ್ರಾಮಾಣಿಕ ಪ್ರಯತ್ನಗಳು ಮುಂದುವರಿಯಲಿದೆ. ನಿಮ್ಮೆಲ್ಲರ ಪ್ರೀತಿ, ಅಭಿಮಾನ, ಬೆಂಬಲ, ಹಾರೈಕೆ ಆಶೀರ್ವಾದಗಳೇ ನನ್ನ ಶಕ್ತಿ ಎಂದು ತಿಳಿಸಿದ್ದಾರೆ.

B. S. Yediyurappa ಮತ್ತೊಮ್ಮೆ ಪ್ರತಿಯೊಬ್ಬರಿಗೂ ನನ್ನ ಅಭಿವಂದನೆಗಳು. ಕಾರ್ಯಕ್ರಮಕ್ಕೆ ಆಗಮಿಸಿದ ಪ್ರತಿಯೊಬ್ಬರೂ ಸುರಕ್ಷಿತವಾಗಿ ತಮ್ಮ ತಮ್ಮ ಊರು, ಮನೆಗಳಿಗೆ ತಲುಪಲಿ, ಯಾರಿಗೂ ಏನೂ ತೊಂದರೆಯಾಗದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...