Wednesday, July 1, 2026
Wednesday, July 1, 2026

Karnataka Sanga ಕರ್ನಾಟಕ ಸಂಘದಲ್ಲಿ ಇಬ್ಬರು ಹಿರಿಯ ಮಹನೀಯರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

Date:

Karnataka Sanga ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ದಿನಾಂಕ 15 ಮೇ 2026ರ ಶುಕ್ರವಾರ, ‘2026ರ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಸಮಾರಂಭ’ ವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಸಂಜೆ 05:30 ಘಂಟೆಗೆ ನಾಡಿನ ಖ್ಯಾತ ಕವಿ ಮತ್ತು ಸಾಹಿತಿಗಳಾದ ಚೊಕ್ಕಾಡಿಯ ಶ್ರೀ ಸುಬ್ರಾಯ ಚೊಕ್ಕಾಡಿ ಅವರಿಗೆ ‘ಡಾ. ದ.ರಾ. ಬೇಂದ್ರೆ ಕಾವ್ಯ ಪ್ರಶಸ್ತಿ’ ಯನ್ನು ಮತ್ತು ಪ್ರಸಿದ್ಧ ಸಾಹಿತಿ, ವಿಮರ್ಶಕರಾದ ಬೆಂಗಳೂರಿನ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅವರಿಗೆ ‘ಡಾ. ತೀ.ನಂ.ಶ್ರೀ. ಸಾಹಿತ್ಯ ವಿಮರ್ಶೆ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಗುವುದು. ಶ್ರೀ ಸುಬ್ರಾಯ ಚೊಕ್ಕಾಡಿ ಅವರ ಕುರಿತು ಶ್ರೀ ಕೆ.ಪಿ. ಸುರೇಶ, ಸಾಹಿತಿ, ದಕ್ಷಿಣ ಕನ್ನಡ ಮತ್ತು ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅವರ ಕುರಿತು ಶ್ರೀ ಹಳೇಮನೆ ರಾಜಶೇಖರ, ಕನ್ನಡ ಪ್ರಾಧ್ಯಾಪಕರು, ಸಾಹಿತಿ, ಉಜಿರೆ ಇವರುಗಳು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

ಪ್ರಶಸ್ತಿಯು ೨೫,೦೦೦/- ರೂ. (ಇಪ್ಪತ್ತೈದು ಸಾವಿರ) ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಅವರು ವಹಿಸಲಿದ್ದಾರೆ.

Karnataka Sanga ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ದೇಶಪ್ರೇಮಿಯಾಗಿ ಎಸ್ಐಆರ್ ಪ್ರಕ್ರಿಯೆಗೆ ಸಹಕರಿಸಿ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ರಾಜ್ಯ ಹಾಗೂ ದೇಶದ ಸಾರ್ವಜನಿಕ ಭದ್ರತೆ ಕಾಪಾಡುವ ನಿಟ್ಟಿನಲ್ಲಿ...

S.N. Channabasappa ನಗರದ ಜಲಮೂಲವಾಗಿರುವ ಚಾನಲ್ ಗಳನ್ನು ಸ್ವಚ್ಛವಾಗಿಡುವುದು ಇಲಾಖೆಯ ಹೊಣೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ...

International Anti-Drug Day ಕಳೆದ ಆರು ತಿಂಗಳಲ್ಲಿ ಸು.₹ 25 ಲಕ್ಷ ಮೌಲ್ಯದ ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ- ಬಿ.ನಿಖಿಲ್

International Anti-Drug Day ಶಿವಮೊಗ್ಗ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಗಾಂಜಾ ಸೇರಿದಂತೆ...