Monday, June 15, 2026
Monday, June 15, 2026

Kuvempu University ಶಿಕ್ಷಕರಲ್ಲಿ ಬಹುಮುಖಿ ವ್ಯಕ್ತಿತ್ವವಿದ್ದರೆ ವಿದ್ಯಾರ್ಥಿಗಳಿಗೆ ಅದರ ಅಭಿಪ್ರೇರಣೆಯಿಂದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಆಸಕ್ತಿ ಬರುತ್ತದೆ: ಪ್ರೊ.ಶರತ್ ಅನಂತ ಮೂರ್ತಿ

Date:

Kuvempu University ಭವಿಷ್ಯದಲ್ಲಿ ಶಿಕ್ಷಕರಾಗುವವರಿಗೆ ಕೌಶಲ್ಯಗಳು ಕರಗತವಾಗಿದ್ದರೆ ಉತ್ತಮ ಬೋಧನೆಗೆ ಹಾಗೂ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಸಂಘಟಿಸಲು ಸಹಕಾರಿಯಾಗುತ್ತದೆ. ಇದರಿಂದ ಮಕ್ಕಳ ಕಲಿಕೆ ಪರಿಣಾಮಕಾರಿಯಾಗಿರುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ತಿಳಿಸಿದರು.

ತಾಳಗುಂದದ ಶ್ರೀ ವೀರಭದ್ರೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಿನ್ನೆ ಹಮ್ಮಿಕೊಂಡಿದ್ದ ಅಣು ಬೋಧನಾ ಕಾರ್ಯಗಾರ ಮತ್ತು ವ್ಯಕ್ತಿತ್ವ ವಿಕಸನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರ ಬಹುಮುಖಿ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಆಗ ವಿದ್ಯಾರ್ಥಿಗಳು ಅಭಿಪ್ರೇರಣೆಯಿಂದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಾರೆ. ಕೌಶಲ್ಯಗಳ ಕಲಿಕೆಯ ಬರದಲ್ಲಿ ಪ್ರಶಿಕ್ಷಣಾರ್ಥಿಗಳು ಯಾಂತ್ರಿಕವಾಗಿ ಅನ್ವಯಿಸಿಕೊಳ್ಳದೆ ನೈತಿಕ, ಮಾನವೀಯ ಮೌಲ್ಯಗಳನ್ನು ಸಹ ಅಳವಡಿಸಿಕೊಳ್ಳಬೇಕೆಂದರು.

ಸಮಕಾಲಿನ ಸಮಸ್ಯೆಗಳಿಗೆ ಸ್ಪಂದಿಸುತ್ತ ಹೆಚ್ಚು ಚರ್ಚೆ ಮಾಡುವ ಮೂಲಕ ಸಮಾಜದಲ್ಲಿ ತೆರೆದುಕೊಳ್ಳುವಂತೆ ಮಾಡಬೇಕು. ಮಾತೃಭಾಷೆಗೆ ಮೊದಲ ಆದ್ಯತೆ ನೀಡಿ. ಆದರೆ ಇಂದಿನ ಔದ್ಯೋಗಿಕ ಪ್ರಪಂಚದಲ್ಲಿ ಇಂಗ್ಲಿಷ್ ಭಾಷೆ ಕಲಿಕೆಯೂ ಅತ್ಯಗತ್ಯ ಎಂದರು.

ಮಾಡುತ್ತಾ ಕಲಿ ಎಂಬ ತತ್ವದ ಘಟಕಾಂಶಗಳಿಗೆ ಪೂರಕವಾಗಿ ಬೋಧನಾ ಮತ್ತು ಕಲಿಕಾ ಪ್ರಕ್ರಿಯೆಗಳು ಸಾಗಬೇಕು. ಶಿಕ್ಷಕರಾಗಬೇಕೆನ್ನುವವರಿಗೆ ಅಣು ಬೋಧನ ಕಾರ್ಯಗಾರವು ತಾಯಿ ಬೇರಿದ್ದಂತೆ. ಒಂದು ಗಿಡದ ವಿವಿಧ ಭಾಗಗಳಿಗೆ ಪೋಷಕಾಂಶಗಳನ್ನು ಸಾಗಿಸುವ ತಾಯಿ ಬೇರು ಎಷ್ಟು ಮುಖ್ಯವೋ ಅಷ್ಟೇ ಅಣು ಬೋಧನ ಕೌಶಲಗಳು ಪ್ರಶಿಕ್ಷಣಾರ್ಥಿಗಳಿಗೆ ಮುಖ್ಯವಾಗಿವೆ ಎಂದು ಪ್ರತಿಪಾದಿಸಿದರು.

Kuvempu University ಪ್ರಾಂಶುಪಾಲ ಡಾ. ಪರಮೇಶ್ ಹೆಚ್. ಮಸಲವಾಡ ಅಧ್ಯಕ್ಷತೆ ವಹಿಸಿದ್ದರು. ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ವೈ. ದೇವರಾಜ್, ಶ್ರೀ ವೀರಭದ್ರೇಶ್ವರ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಜೆ.ಪಿ. ಸುನೀಲ್ ಕುಮಾರ್, ಬೋಧನಾ ವರ್ತುಲ ತಂಡದ ಮಾರ್ಗದರ್ಶಕರಾದ ಗದ್ದಿಗೆಶ್ ಬಿ.ಎಸ್. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ರಾಜ್ಯದ ಎಲ್ಲಾ ಅಧಿಕಾರಿಗಳು “ಟೀಮ್ ಕರ್ನಾಟಕ” ಮನೋಭಾವದಿಂದ ಕಾರ್ಯನಿರ್ವಹಿಸಬೇಕು: ಡಿ.ಕೆ. ಶಿವಕುಮಾರ್

D.K. Shivakumar ರಾಜ್ಯದ ಅಭಿವೃದ್ಧಿ, ಭ್ರಷ್ಟಾಚಾರ ನಿರ್ಮೂಲನೆ, ಶಿಕ್ಷಣ, ಕಾನೂನು...

B.Y. Raghavendra ಕೆರೆ ಬಸವಣ್ಣ ಶೇಡಿನ ಕೆರೆ” ಲೋಕಾರ್ಪಣೆ!

B.Y. Raghavendra ಶ್ರೀ ಡಿ. ಯೇಸು ಪ್ರಕಾಶ್ ಅವರ ಸ್ಮರಣಾರ್ಥ, ಸಾರಾ...

Veerendra Heggade ಕೂಡ್ಲಿಯಲ್ಲಿ ಸಾಮಾಜಿಕಜಾಗೃತಿ ಮೂಡಿಸುವ ಬೀದಿ ನಾಟಕದ ಯಶಸ್ವಿ ಪ್ರದರ್ಶನ

Veerendra Heggade ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...