Friday, May 15, 2026
Friday, May 15, 2026

ಎಸ್ ಪಿಪಿ ಮತ್ತು ಟಿಎಸ್ ಪಿ ಯೋಜನೆಯಡಿ ಎಸ್ ಟಿ / ಎಸ್ ಸಿ‌ ಪಂಗಡದ ರೈತರಿಗೆ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸೌಲಭ್ಯ: ಅರ್ಜಿ ಸಲ್ಲಿಸಲು ಮೆಸ್ಕಾಂ ಪ್ರಕಟಣೆ

Date:

ಮೆಸ್ಕಾಂ ವ್ಯಾಪ್ತಿಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಉಪ-ವಿಭಾಗದ ಅಡಿಯಲ್ಲಿ ಬರುವ ಎಸ್‌ಸಿ ಮತ್ತು ಎಸ್‌ಟಿ ಪಂಗಡದ ರೈತರಿಗೆ ಕೃಷಿ ಪಂಪ್‌ಸೆಟ್‌ಗಳಿಗೆ 2026-27 ನೇ ಸಾಲಿಗೆ ವಿದ್ಯುತ್ ಸೌಲಭ್ಯ ಒದಗಿಸಲು ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯ ಪ್ರಯೋಜನ ಪಡೆಯಲು ಇಚ್ಛಿಸುವ ಅರ್ಹ ರೈತರು ಅಗತ್ಯ ದಾಖಲೆಗಳಾದ ಇತ್ತೀಚಿನ ಪಹಣಿ ಪ್ರತಿ,
ಜಾತಿ ಪ್ರಮಾಣ ಪತ್ರ (ಆರ್ ಡಿ ಸಂಖ್ಯೆ ನಮೂದಿಸಿರಬೇಕು), ಆಧಾರ ಕಾರ್ಡ್ ಪ್ರತಿ,
ಕೊಳವೆ ಬಾವಿ ಇರುವ ಜಾಗದಲ್ಲಿ ನಿಂತಿರುವ ಫಲಾನುಭವಿಯ ಜಿ.ಪಿ.ಎಸ್ ಫೋಟೋ,
ರೇಷನ್ ಕಾರ್ಡ್ ಪ್ರತಿ (ಬಿಪಿಎಲ್),
ಆದಾಯ ಪ್ರಮಾಣ ಪತ್ರ, ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು,
ಬ್ಯಾಂಕ್ ಪಾಸ್‌ಬುಕ್ ಜೆರಾಕ್ಸ್ ಪ್ರತಿಯೊಂದಿಗೆ
ಜೂನ್ 15 ರೊಳಗಾಗಿ ಶಿರಾಳಕೊಪ್ಪ ಮೆಸ್ಕಾಂ ಉಪ-ವಿಭಾಗದ ಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹಿಂದೆ ಗಂಗಾ ಕಲ್ಯಾಣ ಮತ್ತು ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಈಗಾಗಲೇ ವಿದ್ಯುತ್ ಸಂಪರ್ಕ ಪಡೆದಿರುವವರು ಈ ಯೋಜನೆಗೆ ಅರ್ಹರಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ತಾಂತ್ರಿಕ ಕಾರ್ಯಸಾಧ್ಯತೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಆಯ್ಕೆ ಸಮಿತಿಯ ಅನುಮೋದನೆಗೆ ಅನುಗುಣವಾಗಿ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು ಎಂದು ಶಿರಾಳಕೊಪ್ಪ ಮೆಸ್ಕಾಂ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...

H.K.Patil ಗದಗ ಜಿಲ್ಲೆ ಲಕ್ಕುಂಡಿ ಪುರಾತನ ವಸ್ತುಗಳನ್ನ ದೆಹಲಿ ರಾಷ್ಟ್ರೀಯ ವಸ್ತು ಸಂಗ್ರಹಾಲಯದಲ್ಲಿ ವೀಕ್ಷಿಸಿ ಮೆಚ್ಚಿದ ಸಚಿವ ಎಚ್.ಕೆ.ಪಾಟೀಲ್

H.K.Patil. ನವದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಇಂದು ಸನ್ಮಾನ್ಯ ಪ್ರವಾಸೋದ್ಯಮ ಸಚಿವರಾದ...