Wednesday, September 9, 2026
Wednesday, September 9, 2026

ಮೇ 17. ಶ್ರೀವೀರೇಶ್ವರ ಪುಣ್ಯಾಶ್ರಮದಲ್ಲಿ “118 ನೇ ಗಾನಲಹರಿ”

Date:

ಶಿವಮೊಗ್ಗ ನಗರ ರಸ್ತೆಯ ಶ್ರೀ ವೀರೇಶ್ವರ ಪುಣ್ಯಾಶ್ರಮ ಡಾ| ಪಂಡಿತ ಪುಟ್ಟರಾಜಕವಿ ಗವಾಯಿ ಗಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯ ಮತ್ತು ಶ್ರೀ ವೀರೇಶ್ವರ ಪುಣ್ಯಾಶ್ರಮ ಉಚಿತ ಸಂಸ್ಕೃತ ಪಾಠಶಾಲೆಯಲ್ಲಿ ಗಾನಲಹರಿ 118ನೆಯ ಅಮಾವಾಸ್ಯೆ ಮೇ 17ನೇ ಶುಕ್ರವಾರ ಸಂಜೆ 6.30ರಿಂದ ಸಂಗೀತ ಸಂಜೆ ಕಾರ್ಯಕ್ರಮ ಏರ್ಪಡಿಸಿದೆ.
ರಾಜ್ಯ ಪ್ರಶಸ್ತಿ ಪುರಸ್ಕೃತ ಪಂ. ಆರ್.ಬಿ.ಸಂಗಮೇಶ್ವರ ಗವಾಯಿ ಗಳು ಅಧ್ಯಕ್ಷತೆ ವಹಿಸುವರು. ಶಿಕಾರಿಪುರದ ಶ್ರೀಮತಿ ಅಮೃತಾ ಗಿರಿಧರ್ ಅವರು ಆಧ್ಯಾತ್ಮ ನುಡಿ ಗಳನ್ನಾಡುವರು. ಶ್ರೀಶಿರಡಿ ಸಾಯಿ ಭಜನಾ ಮಂಡಳಿಯಿಂದ ಭಜನೆ ನಡೆಯಲಿದೆ. ಆಶ್ರಮದ ಅಂಧ ಮಕ್ಕಳಿಂದ ಪ್ರಾರ್ಥನೆ ನಡೆಯಲಿದೆ. ಹಿಂದೂಸ್ಥಾನಿ ಗಾಯಕ ಉಡುಪಿಯ ರಮೇಶ್ ಮಹಾಂತಾ ಅವರಿಂದ ಸಂಗೀತ ಸೇವೆ ನಡೆಯಲಿದೆ.
ರಾಮಣ್ಣ ಭಜಂತ್ರಿ ಸಹನಾ, ವೀರ ಭದ್ರಯ್ಯ ಶಾಸ್ತ್ರಿ, ವೇದಘೋಷ, ಪಂ. ಆರ್. ತುಕಾರಾಮ್ ರಂಗಧೋಳ್, ವಿನಾಯಕ್ ಭಟ್ ತಬಲ ಹಾಗೂ ಸಿದ್ದಣ್ಣ ಬಡಿಗೇರ್ ಹಾರೋನಿಯಂನೊಂದಿಗೆ ಸಾಥ್ ನೀಡಲಿದ್ದಾರೆ. ರೇವಣಸಿದ್ದಯ್ಯ ಶಾಸ್ತ್ರಿ ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...