Wednesday, September 9, 2026
Wednesday, September 9, 2026

H.K.Patil ಗದಗ ಜಿಲ್ಲೆ ಲಕ್ಕುಂಡಿ ಪುರಾತನ ವಸ್ತುಗಳನ್ನ ದೆಹಲಿ ರಾಷ್ಟ್ರೀಯ ವಸ್ತು ಸಂಗ್ರಹಾಲಯದಲ್ಲಿ ವೀಕ್ಷಿಸಿ ಮೆಚ್ಚಿದ ಸಚಿವ ಎಚ್.ಕೆ.ಪಾಟೀಲ್

Date:

H.K.Patil. ನವದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಇಂದು ಸನ್ಮಾನ್ಯ ಪ್ರವಾಸೋದ್ಯಮ ಸಚಿವರಾದ ಶ್ರೀ ಎಚ್​.ಕೆ ಪಾಟೀಲ ಅವರು ಭೇಟಿ ನೀಡಿ, ನಮ್ಮ ನಾಡಿನ ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಪ್ರದೇಶಕ್ಕೆ ಸೇರಿದ ಅಪರೂಪದ ಪುರಾತನ ವಸ್ತುಗಳ ಸಂಗ್ರಹವನ್ನು ಖುದ್ದಾಗಿ ಪರಿಶೀಲಿಸಿದರು.
1976 ರ ಅಕ್ಟೋಬರ್ 16 ರಂದು ಶ್ರೀ ಡಿ.ಕೆ. ಹೆಬ್ಬೂರ್ ಮತ್ತು ಶ್ರೀ ಟಿ.ಕೆ. ನಾಯಕ್ ಅವರು ಅಂದಿನ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರಿಗೆ ಹಸ್ತಾಂತರಿಸಿದ್ದ 150ಕ್ಕೂ ಹೆಚ್ಚು ಅಮೂಲ್ಯ ಕಲಾಕೃತಿಗಳು ಇಲ್ಲಿದ್ದು, ಪ್ರಾಚೀನ ಶಸ್ತ್ರಾಸ್ತ್ರಗಳು, ಅಪರೂಪದ ಚಿನ್ನ-ಬೆಳ್ಳಿ ನಾಣ್ಯಗಳು, ಸೂಕ್ಷ್ಮ ಕೆತ್ತನೆಯ ಆಭರಣಗಳು ಮತ್ತು ಐತಿಹಾಸಿಕ ಹಸ್ತಪ್ರತಿಗಳು ನಮ್ಮ ನಾಡಿನ ಭವ್ಯ ಇತಿಹಾಸವನ್ನು ಸಾರುವಂತಿವೆ.
H.K.Patil. ಲಾಕರ್‌ನಲ್ಲಿ ಸುರಕ್ಷಿತವಾಗಿರುವ ಈ 150 ಹೆಚ್ಚು ಅಪರೂಪದ ವಸ್ತುಗಳನ್ನು ಸಾರ್ವಜನಿಕರ ವೀಕ್ಷಣೆಗಾಗಿ ದೆಹಲಿಯಲ್ಲೇ ಪ್ರತ್ಯೇಕ ಗ್ಯಾಲರಿಯಲ್ಲಿ ಪ್ರದರ್ಶಿಸಲು ರಾಷ್ಟ್ರೀಯ ವಸ್ತುಸಂಗ್ರಹಾಲಯದೊಂದಿಗೆ ಅಗತ್ಯ ಸಮನ್ವಯ ಸಾಧಿಸುವುದು ಹಾಗೂ ಈ ಅಮೂಲ್ಯ ಕಲಾಕೃತಿಗಳನ್ನು ಶಾಶ್ವತವಾಗಿ ಕರ್ನಾಟಕಕ್ಕೆ ಅದರಲ್ಲೂ ವಿಶೇಷವಾಗಿ ಲಕ್ಕುಂಡಿಗೆ ಮರಳಿ ತರಲು ಕೇಂದ್ರ ಸರ್ಕಾರ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯೊಂದಿಗೆ ಅಧಿಕೃತ ಮಾತುಕತೆ ಹಾಗೂ ಕಾನೂನಾತ್ಮಕ ಪ್ರಕ್ರಿಯೆಗಳನ್ನು ತಕ್ಷಣವೇ ಪ್ರಾರಂಭಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸನ್ಮಾನ್ಯ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...