ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಆದಿ ಕರ್ನಾಟಕ ಜನಾಂಗದ ಬೀದಿಗೆ ರಸ್ತೆ ಬಂದ್ ಮಾಡಿರುವ ವಿಚಾರವಾಗಿ ಪ್ರತಿಭಟನೆ ಇಂದಿಗೆ 103 ದಿನಗಳಿಗೆ ತಲುಪಿದೆ,. ಅರಬಿಳುಚಿ ಗ್ರಾಮದಲ್ಲಿ 60ಕ್ಕೂ ಹೆಚ್ಚು ಪರಿಶಿಷ್ಟ ಜನಾಂಗದವರಿಗೆ ಸೇರಿದ ಮನೆಗಳಿದ್ದು ಆ ಮನೆಗಳಿಗಿದ್ದು, ರಸ್ತೆ ಸಂಪರ್ಕವನ್ನು ಈ ಹಿಂದೆ ಕಡಿತ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆಗೆ ಹೇಳಿದ ನಿವಾಸಿಗಳು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರು ಯಾವುದೇ ಪ್ರಯೋಜನ ಆಗಿರಲಿಲ್ಲ. ಹಾಗಾಗಿ ಕೋರ್ಟ್ ಮೆಟ್ಟಿಲೇರಿ ನ್ಯಾಯ ಕೇಳಲಾಗಿತ್ತು, ಅದನ್ನು ಕೂಡ ಗಾಳಿಗೆ ತೂರಿದ ಅಧಿಕಾರಿಗಳ ವಿರುದ್ಧ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಹಾಗೂ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತ್ತು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಹಾಗೂ ಆ 60 ಮನೆಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಅರಬಿಳಚಿಯಲ್ಲಿ ಪರಿಶಿಷ್ಟ ಜಾತಿಯವರ ಬೀದಿಗೆ ರಸ್ತೆ ಬಂದ್ : 103 ದಿನಗಳಿಂದ ಪ್ರತಿಭಟನೆ
Date:
