Wednesday, September 9, 2026
Wednesday, September 9, 2026

Department of Kannada and Culture ಕೇಂದ್ರ ಸರ್ಕಾರದ” ಪದ್ಮ” ಪ್ರಶಸ್ತಿಗಳಿಗಾಗಿ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನ

Date:

Department of Kannada and Culture ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2026 ನೇ ಸಾಲಿನ ಕೇಂದ್ರ ಸರ್ಕಾರದ ಪ್ರತಿಷ್ಠಿತ “ಪದ್ಮ ವಿಭೂಷಣ”, “ಪದ್ಮ ಭೂಷಣ” ಮತ್ತು “ಪದ್ಮಶ್ರೀ” ಪ್ರಶಸ್ತಿಗಳ ನಾಮನಿರ್ದೇಶನಕ್ಕಾಗಿ ಅರ್ಹ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕಲೆ, ಸಮಾಜ ಸೇವೆ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ವ್ಯಾಪಾರ ಮತ್ತು ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ನಾಗರಿಕ ಸೇವೆ, ಕ್ರೀಡೆ, ವನ್ಯಜೀವಿ ಸಂರಕ್ಷಣೆ, ಅಥ್ಲೆಟಿಕ್, ಸಾಹಸ ಕ್ರೀಡೆ, ಪರಿಸರ ಸಂರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ಅಸಾಧಾರಣ ಮತ್ತು ವಿಶಿಷ್ಟ ಸೇವೆ ಸಲ್ಲಿಸಿದ ಸಾಧಕರು ಅರ್ಜಿ ಸಲ್ಲಿಸಬಹುದಾಗಿದೆ.

ಸಾಧಕರು ತಮ್ಮ ಸ್ವ-ವಿವರಗಳೊಂದಿಗೆ ಸಾಧನೆಯ ದಾಖಲೆಗಳನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸಿದ್ದಪಡಿಸಿ ಅರ್ಜಿಗಳನ್ನು kanbhavblr@gmail.com ಮತ್ತು dkc.shivamogga@gmail.com ಇಮೇಲ್ ವಿಳಾಸಗಳಿಗೆ ಕಳುಹಿಸಿಕೊಡಬೇಕಾಗಿ ವಿನಂತಿಸಲಾಗಿದೆ.

Department of Kannada and Culture ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು 10.06.2026 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 08182-223354 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...