ಕನ್ನಡ ರಂಗಭೂಮಿಗೆ ಅಪಾರ ಕೊಡುಗೆ ನೀಡಿದ ಕಲಾವಿದರ ವಿವರಗಳನ್ನು ಒಳಗೊಂಡ ‘ಬೃಹತ್ ರಂಗ ಸಂಪುಟ’ವನ್ನು ಹೊರತರಲು ಕರ್ನಾಟಕ ನಾಟಕ ಅಕಾಡೆಮಿ ನಿರ್ಧರಿಸಿದ್ದು, ಅರ್ಹ ರಂಗಕರ್ಮಿಗಳಿಂದ ಮಾಹಿತಿ ಮತ್ತು ಅರ್ಜಿಗಳನ್ನು ಆಹ್ವಾನಿಸಿದೆ.
ಕಳೆದ 50 ವರ್ಷಗಳಲ್ಲಿ ಅಕಾಡೆಮಿಯು ಈಗಾಗಲೇ 3 ಸಂಪುಟಗಳಲ್ಲಿ 800ಕ್ಕೂ ಹೆಚ್ಚು ಕಲಾವಿದರ ಮಾಹಿತಿಯನ್ನು ದಾಖಲಿಸಿದೆ. ಆದರೆ, ಇನ್ನೂ ಅನೇಕ ಹಿರಿಯ ಹಾಗೂ ಅರ್ಹ ಕಲಾವಿದರ ಸಾಧನೆಗಳು ಬೆಳಕಿಗೆ ಬರಬೇಕಿದೆ. ಈ ನಿಟ್ಟಿನಲ್ಲಿ ರಂಗಭೂಮಿಯಲ್ಲಿ ಸಕ್ರಿಯವಾಗಿರುವ ನಟರು, ನಿರ್ದೇಶಕರು, ನಾಟಕಕಾರರು, ಸಂಗೀತ ತಜ್ಞರು, ರಂಗ ಕುಶಲಕರ್ಮಿಗಳು ಹಾಗೂ ವೇಷಭೂಷಣ ಸೇರಿದಂತೆ ನೇಪಥ್ಯದಲ್ಲಿ ಕೆಲಸ ಮಾಡುವ ಎಲ್ಲಾ ಕಲಾವಿದರ ವಿವರಗಳನ್ನು ಸಂಗ್ರಹಿಸಲು ಅಕಾಡೆಮಿ ಮುಂದಾಗಿದೆ.
ಮೊದಲ ಹಂತದಲ್ಕಿ ರಂಗಭೂಮಿ ಕ್ಷೇತ್ರದಲ್ಲಿ ಕನಿಷ್ಠ 30 ವರ್ಷಗಳಿಗೂ ಹೆಚ್ಚು ಸೇವೆ ಸಲ್ಲಿಸಿರಬೇಕು.
40 ವರ್ಷಕ್ಕೂ ಮೇಲ್ಪಟ್ಟ ರಂಗಭೂಮಿ ಕಲಾವಿದರ ವಿವರಗಳನ್ನು ಮಾತ್ರ ಸಂಗ್ರಹಿಸಲಾಗುತ್ತಿದೆ.
ಕಲಾವಿದರು ತಮ್ಮ ಇತ್ತೀಚಿನ ಪಾಸ್ ಪೋರ್ಟ್ ಸೈಜಿನ ಭಾವಚಿತ್ರ,ನಾಟಕದಲ್ಲಿ ಅಭಿನಯಿಸುತ್ತಿರುವ/ಕೆಲಸ ಮಾಡುತ್ತಿರುವ ಶೈಲಿಯ ಛಾಯಾಚಿತ್ರ.
ಗರಿಷ್ಠ 300 ಪದಗಳಿಗೆ ಮೀರದಂತೆ (2 ಪುಟಗಳು) ತಮ್ಮ ಸ್ವ-ವಿವರ ಮಾಹಿತಿಯನ್ನು ಸಲ್ಲಿಸಲು ಜೂನ್ 10 ಕೊನೆಯ ದಿನವಾಗಿದೆ.
ಆಸಕ್ತರು ತಮ್ಮ ಸಂಪೂರ್ಣ ವಿವರಗಳನ್ನು ರಿಜಿಸ್ಟ್ರಾರ್, ಕರ್ನಾಟಕ ನಾಟಕ ಅಕಾಡೆಮಿ, ಕನ್ನಡ ಭವನ, ನೆಲ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ. ರಸ್ತೆ, ಬೆಂಗಳೂರು – 560 002.
ದೂರವಾಣಿ ಸಂಖ್ಯೆ: 080 – 22244176 ಈ ವಿಳಾಸಕ್ಕೆ ಅಥವಾ ಇಮೇಲ್ academy.nataka@gmail.com
ಮೂಲಕ ಕಳುಹಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್ ತಿಳಿಸಿದ್ದಾರೆ.
