Thursday, August 6, 2026
Thursday, August 6, 2026

S.N. Channabasappa ಸ್ಥಳೀಯ ನಾಗರಿಕರನ್ನ ಸಂಪೂರ್ಣ ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿ ನಡೆಸಿ- ಎಸ್.ಎನ್‌. ಚನ್ನಬಸಪ್ಪ

Date:

S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 6ರ ವ್ಯಾಪ್ತಿಯ ಗಾಡಿಕೊಪ್ಪದ ಪೊಲೀಸ್ ಲೇಔಟ್‌ನಲ್ಲಿ ಮಹಾನಗರ ಪಾಲಿಕೆಯಿಂದ ಕೈಗೆತ್ತಿಕೊಳ್ಳಲಾಗಿರುವ ಯುಜಿಡಿ ವೆಟ್‌ವೆಲ್ ಕಾಮಗಾರಿ ಸ್ಥಳಕ್ಕೆ ಮಾನ್ಯ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಭೇಟಿ ನೀಡಿ, ಅಧಿಕಾರಿಗಳು ಮತ್ತು ಸಾರ್ವಜನಿಕರೊಂದಿಗೆ ಸಭೆ ನಡೆಸಿದರು.

ಸದರಿ ಪೊಲೀಸ್ ಲೇಔಟ್‌ನಲ್ಲಿ ಪಾಲಿಕೆ ವತಿಯಿಂದ ನಡೆಯುತ್ತಿದ್ದ ಯುಜಿಡಿ ಕಾಮಗಾರಿಗೆ ತಾಂತ್ರಿಕ ಹಾಗೂ ಸ್ಥಳೀಯ ಕಾರಣಗಳಿಂದ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಸ್ಪಂದಿಸಿದ ಶಾಸಕರು, ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

S.N. Channabasappa ಸಾರ್ವಜನಿಕರು ಮತ್ತು ಪಾಲಿಕೆಯ ಇಂಜಿನಿಯರ್‌ಗಳೊಂದಿಗೆ ಸಮಾಲೋಚನೆ ನಡೆಸಿದ ಶಾಸಕರು, “ನಗರದ ಹಾಗೂ ವಾರ್ಡ್‌ನ ಸರ್ವಾಂಗೀಣ ಅಭಿವೃದ್ಧಿ ನಮಗೆ ಮುಖ್ಯ. ಆದರೆ, ಯಾವುದೇ ಕಾಮಗಾರಿಯಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಬಾರದು. ಸ್ಥಳೀಯ ನಾಗರಿಕರ ಆತಂಕಗಳನ್ನು ದೂರ ಮಾಡಿ, ಅವರನ್ನು ಸಂಪೂರ್ಣವಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರಿಕೆಯಿಂದ ಸ್ಥಳ ಪರಿಶೀಲಿಸಿ ಕಾಮಗಾರಿಯನ್ನು ತಕ್ಷಣವೇ ಪುನರಾರಂಭಿಸಬೇಕು” ಎಂದು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಶಾಸಕರ ಮಧ್ಯಸ್ಥಿಕೆಯಿಂದಾಗಿ ಸ್ಥಳೀಯರ ಗೊಂದಲಗಳು ಬಗೆಹರಿದಿದ್ದು, ಕಾಮಗಾರಿ ನಡೆಸಲು ಸಾರ್ವಜನಿಕರು ಸಮ್ಮತಿ ಸೂಚಿಸಿದರು.

ಈ ಸ್ಥಳ ಪರಿಶೀಲನಾ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳು, ವಾರ್ಡ್‌ನ ಪ್ರಮುಖ ಮುಖಂಡರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...