Wednesday, June 10, 2026
Wednesday, June 10, 2026

Dr. Dhananjaya Sarji ದುಬಾರೆ ಸಾಕಾನೆ ಶಿಬಿರ ದುರಂತ: ಇಂತಹ ಘಟನೆ ಮರು ಕಳಿಸದಿರಲಿ- ಡಾ.ಧನಂಜಯ ಸರ್ಜಿ

Date:

Dr. Dhananjaya Sarji ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ನದಿಯಲ್ಲಿ ಆನೆಗಳನ್ನು ಸ್ನಾನ ಮಾಡಿಸುವ ವೇಳೆ ಕಂಜನ್ ಹೆಸರಿನ ಸಾಕಾನೆ ಮತ್ತೊಂದು ಆನೆ ಮೇಲೆ ದಾಳಿ ಮಾಡಿದ್ದು, ಈ ಆನೆ ಕೆಳಗೆ ಬಿದ್ದಿದೆ. ಸಂದರ್ಭದಲ್ಲಿ ಸ್ಥಳದಲ್ಲೇ ಇದ್ದ ಚೆನ್ನೈ ಮೂಲದ ಪ್ರವಾಸಿ ಮಹಿಳೆ ಆನೆ ಕೆಳಗೆ ಸಿಲುಕಿ ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡು ಬಲಿಯಾಗಿರುವುದು ಅತ್ಯಂತ ದುಃಖಕರ ಮತ್ತು ಆಘಾತಕಾರಿ ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ದುಬಾರೆ ಆನೆ ಶಿಬಿರದ ದುರಂತದ ಬಗ್ಗೆ ಖೇದ ವ್ಯಕ್ತಪಡಿಸಿದ್ದಾರೆ.

ಪ್ರವಾಸೋದ್ಯಮದ ಬೆಳವಣಿಗೆಯಷ್ಟೇ ಸಾರ್ವಜನಿಕರ ಜೀವ ರಕ್ಷಣೆಯೂ ಮುಖ್ಯ. ಇಂತಹ ದುರಂತಗಳು ಮರುಕಳಿಸದಂತೆ ತಡೆಯಲು ಸಾರ್ವಜನಿಕರು ಹಾಗೂ ಸರ್ಕಾರ/ಅರಣ್ಯ ಇಲಾಖೆ ತಕ್ಷಣವೇ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕಿದೆ. ರಾಜ್ಯದ ಎಲ್ಲಾ ಆನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆ ಹಾಗೂ ವನ್ಯಜೀವಿಗಳ ನಿರ್ವಹಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲಿ.

Dr. Dhananjaya Sarji ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಂ.ಎಲ್.ಸಿ. ಡಾ.ಧನಂಜಯ ಸರ್ಜಿ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Municipal Corporation ಅತಿವೃಷ್ಠಿ ತುರ್ತು ನಿರ್ವಹಣೆಗೆ ನಗರಪಾಲಿಕೆಯಿಂದ ಜನರ ಉಪಯೋಗಕ್ಕೆ ಸಹಾಯವಾಣಿ ಸೌಲಭ್ಯ.

Shivamogga Municipal Corporation ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾಗುವ ಸೂಕ್ಷ್ಮ...

Prahlad Joshi ಸಾಗರದ ಎಲ್.ಬಿ.ಕಾಲೇಜಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಭೇಟಿ.

Prahlad Joshi ಮಾನ್ಯ ಕೇಂದ್ರ ಸರ್ಕಾರದ ಮಂತ್ರಿ ಗಳಾದ ಪ್ರಹ್ಲಾದ್ ಜೋಷಿ,...

Chamber of Commerce Shivamogga ಕಾನೂನಿನ ಅರಿವಿನಿಂದ ತೆರಿಗೆ ಸಂಗ್ರಹದಲ್ಲಿ ಗಣನೀಯ ಹೆಚ್ಚಳವಾಗುತ್ತದೆ- ವಿ.ಕುಮಾರ್.

Chamber of Commerce Shivamogga ದಾಖಲೆ ಪ್ರಮಾಣದಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ...