Saturday, July 11, 2026
Saturday, July 11, 2026

ಚರ್ಮ ಕುಶಲಕರ್ಮಿಗಳಿಗೆ ಪಾದರಕ್ಷಾ ತಯಾರಿಕಾ ಸ್ಪರ್ಧೆ

Date:

ಶಿವಮೊಗ್ಗ ಜಿಲ್ಲೆಯ ಡಾ|| ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ನೈಜ ಚರ್ಮ ಕುಶಲಕರ್ಮಿಗಳಿಗೆ ಕರಕುಶಲೆಯ ಕೌಶಲ್ಯ ಹಾಗೂ ಪಾದರಕ್ಷೆಗಳ ತಯಾರಿಕೆಯ ನೈಪುಣ್ಯ ಮತ್ತು ತಾಂತ್ರಿಕ ಕೌಶಲ್ಯವನ್ನು ಗುರುತಿಸಿ ಉತ್ತೇಜಿಸುವ ಉದ್ದೇಶದಿಂದ ಸ್ಥಳದಲ್ಲೇ ಪಾದರಕ್ಷಾ ತಯಾರಿಕಾ ಸ್ಪರ್ಧೆಯನ್ನು ಆಯೋಜಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಪರಿಶಿಷ್ಟ ಜಾತಿಗೆ ಸೇರಿದ ಆರುಂಧತಿಯಾರ್, ಚಮ್ಮದಿಯಾ, ಚಮಾರ್, ಚಂಬಾರ್, ಚಮಗಾರ್, ದಕ್ಕಲ್, ದಕ್ಕಲ್ವಾರ್, ದಕ್ಕಲಿಗ, ಮಾದರ್, ಮಾದಿಗ್, ಮಾದಿಗ, ಮಿನಿಮಾದಿಗ್, ಜಾಂಬುವುಲು, ಹರಳಯ್ಯ, ಮಾಚಿಗಾರ್, ಮೋಚಿಗಾರ್, ಮೋಚಿ, ಮುಚಿ, ತೆಲುಗು ಮೋಚಿ, ಕಮಾಟಿ, ಮೋಚಿ, ರೋಹಿದಾಸ್, ಧೋರ್, ಕಕ್ಕಯ್ಯ, ಕಂಕಯ್ಯ, ಸಮಗಾರ, ಸಮಗಾರ್ ಚರ್ಮ ಕುಶಲಕಮಿಗಳು/ಕುಟುಂಬದವರಾಗಿದ್ದು, 18 ರಿಂದ 35 ವರ್ಷದೊಳಗಿನವರಾಗಿರಬೇಕು. ಅವಶ್ಯವಿರುವ ಕಚ್ಚಾವಸ್ತು ಹಾಗೂ ಟೂಲ್ಸ್ ಗಳನ್ನು ಸ್ವತಃ ತರಬೇಕು. ಪುರುಷ/ಮಹಿಳೆಯ ಒಂದು ಜೊತೆ ಪಾದರಕ್ಷೆಗಳನ್ನುಮಾತ್ರ ತಯಾರಿಸುವುದು. ಕೊಲ್ಹಾಪುರಿ ಮಾದರಿಯ ಪಾದರಕ್ಷೆಗಳನ್ನು ಪರಿಗಣಿಸುವುದಿಲ್ಲ.
ಸ್ಪರ್ಧೆಯು ಜೂ. 06 ರಂದು ಬೆಳಗ್ಗೆ 11.00 ರಿಂದ ಸಂಜೆ 5.00ರವರೆಗೆ ಕರ್ನಾಟಕ ಇನ್ಸ್ವಿಟ್ಯೂಟ್ ಆಫ್ ಲೆದರ್ & ಫ್ಯಾಷನ್ ಟೆಕ್ನಾಲಜಿ, ಉಲ್ಲಾಳ ಉಪನಗರ, ಕೆಂಗೇರಿ, ಬೆಂಗಳೂರು ಇಲ್ಲಿ ನಡೆಯಲಿದೆ. ಸ್ಪರ್ಧೆಯಲ್ಲಿ ಗೆದ್ದವರಿಗೆ ಪ್ರಥಮ ಬಹುಮಾನ ರೂ. 50000/-, ದ್ವಿತೀಯ ಬಹುಮಾನ ರೂ. 30000/-, ತೃತೀಯ ಬಹುಮಾನ ರೂ. 20000/- ಹಾಗೂ 2 ಸಮಾಧಾನಕರ ಬಹುಮಾನ ರೂ. 10000/- ಗಳಾಗಿರುತ್ತದೆ.
ಆಸಕ್ತರು ಅರ್ಜಿಯನ್ನು https://lidkar.com ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಜಾತಿ ಮತ್ತು ವೃತ್ತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ನಿಗಮದಿಂದ ತರಬೇತಿ ಪಡೆದ ದಾಖಲೆ/ ಇ-ಶ್ರಮ ಕಾರ್ಡ್ ಗಳನ್ನು ಲಗತ್ತಿಸಿ ಡಾ|| ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿ., ಡಾ|| ಜಗಜೀವನರಾಂ ಲಿಡಕರ್ ಭವನ, ಮಿಲ್ಲರ್ಸ್ ಟ್ಯಾಂಕ್ ಬಂಡ ಏರಿಯಾ, ವಸಂತನಗರ, ಬೆಂಗಳೂರು 560052 ಇಲ್ಲಿಗೆ ಅಂಚೆ ಮೂಲಕ ಮೇ 30 ರೊಳಗಾಗಿ ಸಲ್ಲಿಸುವಂತೆ ಶಿವಮೊಗ್ಗ ಲಿಡಕರ್ ಮಾರಾಟ ಮಳಿಗೆಯ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9141304210 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...