ನಮ್ಮ ಶಿವಮೊಗ್ಗ ನಗರದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ್ ಸರ್ಜಿ ಅವರ ಕ್ಷೇತ್ರಾಭಿವೃದ್ಧಿ ಅನುದಾನದಡಿ ಮಂಜೂರಾಗಿದ್ದ ನೂತನ ‘ಪೊಲೀಸ್ ವಾಹನಕ್ಕೆ’ (ಜೀಪ್) ಇಂದು ಎಸ್.ಪಿ. ಕಚೇರಿ ಆವರಣದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ನಿಖಿಲ್ ಅವರ ಸಮ್ಮುಖದಲ್ಲಿ ಹಸಿರು ನಿಶಾನೆ ತೋರಿಸಿ, ಇಲಾಖೆಗೆ ಹಸ್ತಾಂತರಿಸಲಾಯಿತು.
ಶಿವಮೊಗ್ಗದ ಪ್ರಮುಖ ಕೇಂದ್ರಗಳಿರುವ ಜಯನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರ ತುರ್ತು ಸೇವೆಗೆ ಈ ವಾಹನ ನೆರವಾಗಲಿದೆ.
ಈ ವೇಳೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
