Saturday, July 11, 2026
Saturday, July 11, 2026

Madhu Bangarappa ಸಚಿವ ಮಧು ಬಂಗಾರಪ್ಪ ಪತ್ರಿಕಾ ಗೋಷ್ಠಿ: ನೀಟ್ ಪರೀಕ್ಷೆ ಪ್ರಸ್ತಾಪ. ಬಿಜೆಪಿ ಯವರ ವಿರುದ್ಧ ಕೆಂಡ

Date:

ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ 19 ಕೆಪಿಎಸ್ ಶಾಲೆಗಳು ಆರಂಭವಾಗುತ್ತಿವೆ ಎಂದು ಅವರು ತಿಳಿಸಿದ್ದಾರೆ.
ಒಂದು ಶಾಲೆಗೆ ಸುಮಾರು 3.5 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದರು.

ಜೂನ್ ಹಾಗೂ ಜುಲೈ ತಿಂಗಳೊಳಗೆ ಎಲ್ಲಾ ಕೆಪಿಎಸ್ ಶಾಲೆಗಳು ಆರಂಭವಾಗಲಿವೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನೊಂದೆಡೆ ಕನ್ನಡ ಶಾಲೆಗಳ ಮುಚ್ಚುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು,
ಕನ್ನಡ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಹೆಚ್ಚುತ್ತಿದೆ ಎಂದು ಹೇಳಿದರು.
ಈ ಸಂಬಂಧ ಎರಡು ಬಜೆಟ್‌ಗಳಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾಗಿ ತಿಳಿಸಿದ್ದಾರೆ.
ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಅನುದಾನಿತ ಹಾಗೂ ಅನುದಾನರಹಿತ ಕನ್ನಡ ಶಾಲೆಗಳಿಗೆ ಆರ್ಥಿಕ ನೆರವು ನೀಡಿ ಉಳಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಸಚಿವರು ಸ್ಪಷ್ಟಪಡಿಸಿದರು.ಎನ್‌ಪಿಎಸ್ ಮತ್ತು ಓಪಿಎಸ್ ಕುರಿತಾಗಿ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Madhu Bangarappa ಇನ್ನು ಮಳೆಗಾಳಿ ಹಿನ್ನೆಲೆ ಹೊಳೆಹೊನ್ನೂರು ಭಾಗದಲ್ಲಿ ಉಂಟಾದ ನಷ್ಟದ ಕುರಿತು ಪ್ರತಿಕ್ರಿಯಿಸಿದ ಅವರು,
ಜಿಲ್ಲಾಧಿಕಾರಿಗಳಿಂದ ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ವಿಶೇಷ ಅನುದಾನದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.

ಸಿಎಂ ರಿಲೀಫ್ ಫಂಡ್ ಹಾಗೂ ಎನ್‌ಡಿಆರ್‌ಎಫ್ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ವರದಿ ಆಧರಿಸಿ ವಿಶೇಷ ಪ್ಯಾಕೇಜ್ ಘೋಷಣೆ ಕುರಿತು ಚರ್ಚೆ ನಡೆಯುತ್ತಿದೆ ಎಂದರು.
ಮರಗಳು ಭಾರೀ ಪ್ರಮಾಣದಲ್ಲಿ ಬಿದ್ದಿರುವುದರಿಂದ ವಿಶೇಷ ಪರಿಹಾರ ಅಗತ್ಯವಿದೆ ಎಂದು ಹೇಳಿದರು.

ಇದೇ ವೇಳೆ ಶಾಲೆಗಳಲ್ಲಿ ಕೇಸರಿ ಶಾಲು ಅಭಿಯಾನದ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಚಿವ ಮಧು ಬಂಗಾರಪ್ಪ,
“ಈ ರೀತಿಯ ರಾಜಕೀಯ ಮಾಡಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು” ಎಂದು ವಾಗ್ದಾಳಿ ನಡೆಸಿದರು.ಮಹಾರಾಷ್ಟ್ರದಲ್ಲಿ ಒಂದು ರೀತಿ, ಇಲ್ಲಿ ಮತ್ತೊಂದು ರೀತಿ ರಾಜಕೀಯ ಮಾಡುವುದು ಸರಿಯಲ್ಲ ಎಂದರು.
“ಇವೆಲ್ಲವೂ ರಬ್ಬೀಷ್ ಕೆಲಸ” ಎಂದು ಟೀಕಿಸಿದರು.

ಬಿಜೆಪಿಯವರು ಮಕ್ಕಳ ಭವಿಷ್ಯ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ನೀಟ್ ಪರೀಕ್ಷೆಯಲ್ಲಿ 25 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಹೇಳಿದರು.
5 ಮಕ್ಕಳ ಪ್ರಾಣ ಹೋಗಿರುವುದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧವೂ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು,
“ಹೊಣೆಗಾರರ ಮೇಲೆ ಪ್ರಧಾನಿಗಳು ಕ್ರಮ ಕೈಗೊಳ್ಳಬೇಕಿತ್ತು” ಎಂದರು. “ಐದು ದಿನಗಳ ಬಳಿಕ ಸಚಿವರು ಪ್ರತ್ಯಕ್ಷರಾಗುತ್ತಾರೆ.
ಇಂತಹ ಕೆಲಸಗಳಿಗೆ ನಾನು ಉತ್ತರ ಕೊಡಬೇಕಾ?”. “ಮಕ್ಕಳ ಸಾವಿನಿಂದ ಪೋಷಕರ ಕನಸು ನಾಶವಾಗಿದೆ.
ಈ ದುರಂತದ ಬಗ್ಗೆ ಬಿಜೆಪಿ ಯಾಕೆ ಮಾತನಾಡುತ್ತಿಲ್ಲ?” ಎಂದು ಪ್ರಶ್ನಿಸಿದರು.

ಜನಿವಾರ ಹಾಗೂ ಶಿವದಾರ ವಿಚಾರಗಳನ್ನು ಮುಂದಿಟ್ಟು ಸಮಾಜದಲ್ಲಿ ವಿಭಜನೆ ಮಾಡುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದರು.“ವಿಕೃತ ಮನಸ್ಸಿನಿಂದ ಇಂತಹ ಕೆಲಸ ಮಾಡಲಾಗುತ್ತಿದೆ” ಎಂದು ಕಿಡಿಕಾರಿದರು.
“ಎಲ್ಲಾ ಧರ್ಮದವರನ್ನೂ ಕಾಪಾಡುವ ಕೆಲಸ ನಮ್ಮದು” ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...