Friday, May 22, 2026
Friday, May 22, 2026

ವಿದ್ಯುದ್ದೀಪವಿಲ್ಲದೇ ಕತ್ತಲೆಯ ಕೂಪವಾಗಿರುವ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ

Date:

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಇಂದು ಭಾರೀ ಅವ್ಯವಸ್ಥೆ ಕಂಡುಬಂದಿದೆ. ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಮೆಸ್ಕಾಂ ಇಲಾಖೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರಿಂದ ಬೆಳಗ್ಗೆಯಿಂದಲೇ ರೋಗಿಗಳು ಸಂಕಷ್ಟ ಅನುಭವಿಸಿದರು. ಆಸ್ಪತ್ರೆಯಲ್ಲಿ ಜನರೇಟರ್ ವ್ಯವಸ್ಥೆ ಇದ್ದರೂ ಅದನ್ನು ಬಳಸದೇ ಆಡಳಿತ ಮಂಡಳಿ ನಿರ್ಲಕ್ಷ್ಯ ತೋರಿದ ಆರೋಪ ಕೇಳಿಬಂದಿದೆ.

ತೀರ್ಥಹಳ್ಳಿ ಪಟ್ಟಣದ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವನ್ನು ಮೆಸ್ಕಾಂ ಇಲಾಖೆ ಕಡಿತಗೊಳಿಸಿತು. ಇದರ ಪರಿಣಾಮವಾಗಿ ತೀರ್ಥಹಳ್ಳಿಯ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯೂ ಕತ್ತಲಿನಲ್ಲಿ ಮುಳುಗಿತು.

ಬೆಳಗ್ಗೆಯಿಂದ ಸಂಜೆಯವರೆಗೂ ವಿದ್ಯುತ್ ಇಲ್ಲದೇ ಆಸ್ಪತ್ರೆಯ ರೋಗಿಗಳು ಮತ್ತು ಸಿಬ್ಬಂದಿ ಪರದಾಡುವಂತಾಯಿತು. ವಿಶೇಷವಾಗಿ ವಾರ್ಡ್‌ಗಳಲ್ಲಿ ಫ್ಯಾನ್ ಹಾಗೂ ದೀಪಗಳಿಲ್ಲದೆ ರೋಗಿಗಳು ತೀವ್ರ ತೊಂದರೆ ಅನುಭವಿಸಿದರು.

ಇದೇ ವೇಳೆ ಆಸ್ಪತ್ರೆಯಲ್ಲಿ ಇಂದು ಎಂಟು ಶಸ್ತ್ರಚಿಕಿತ್ಸೆಗಳು ನಡೆದಿದ್ದು, ವಿದ್ಯುತ್ ಸಮಸ್ಯೆಯಿಂದ ರೋಗಿಗಳು ಮತ್ತು ಅವರ ಸಂಬಂಧಿಕರು ಆತಂಕಕ್ಕೀಡಾದರು. ಆಸ್ಪತ್ರೆಯಲ್ಲಿ ಜನರೇಟರ್ ವ್ಯವಸ್ಥೆ ಇದ್ದರೂ ಅದನ್ನು ಕಾರ್ಯಗತಗೊಳಿಸದೇ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪಗಳು ಕೇಳಿಬಂದಿವೆ.

ಈ ಘಟನೆಗೆ ರೋಗಿಗಳು ಹಾಗೂ ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆಸ್ಪತ್ರೆ ಆಡಳಿತದ ವಿರುದ್ಧ ಅಸಮಾಧಾನ ಹೊರಹಾಕಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Adichunchanagiri Education Trust ವೃತ್ತಿಗೆ ಗೌರವಕೊಡಿ, ಅದರಿಂದ ವ್ಯಕ್ತಿಯ ಬದುಕು ಹಸನಾಗುತ್ತದೆ : ಶ್ರೀಪ್ರಸನ್ನನಾಥಶ್ರೀ

Adichunchanagiri Education Trust ವೃತ್ತಿಗೆ ಗೌರವ ಕೊಡಿ, ಯಾವ ವ್ಯಕ್ತಿ ವೃತ್ತಿಗೆ...

B.Y. Raghavendra ಬೇಸೂರು ಅಣುಸ್ಥಾವರದ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾಪ ಸಲ್ಲಿಸಿಲ್ಲ- ಬಿ.ವೈ.ರಾಘವೇಂದ್ರ

B.Y. Raghavendra ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ...

Madhu Bangarappa ಸಚಿವ ಮಧು ಬಂಗಾರಪ್ಪ ಪತ್ರಿಕಾ ಗೋಷ್ಠಿ: ನೀಟ್ ಪರೀಕ್ಷೆ ಪ್ರಸ್ತಾಪ. ಬಿಜೆಪಿ ಯವರ ವಿರುದ್ಧ ಕೆಂಡ

ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗ ಜಿಲ್ಲೆಯಲ್ಲಿ...

Madhu Bangarappa ಜೂನ್ 1. ಶಿವಮೊಗ್ಗದಲ್ಲಿ ಸಾವಿರ ಕೆಪಿಎಸ್ ಶಾಲೆಗಳಿಗೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ – ಮಧು ಬಂಗಾರಪ್ಪ

Madhu Bangarappa ಬೆಲೆ ಕಟ್ಟಲಾಗದ ಗ್ಯಾರಂಟಿಯಾದ ಶಿಕ್ಷಣವನ್ನು ಇಡೀ ದೇಶಕ್ಕೇ ಮಾದರಿಯಾಗಿ...