B.Y. Raghavendra ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಯಾಗಲಿದೆ ಎಂಬ ವದಂತಿಗಳಿಂದ ಸಾರ್ವಜನಿಕರಲ್ಲಿ ಮೂಡಿದ್ದ ಆತಂಕವನ್ನು ನಿವಾರಿಸುವ ನಿಟ್ಟಿನಲ್ಲಿ, ಸಾಗರದ ಉಪವಿಭಾಗಾಧಿಕಾರಿಗಳ (AC) ಕಚೇರಿಯಲ್ಲಿ ಬೇಸೂರು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಖುದ್ದಾಗಿ ಭಾಗವಹಿಸಿ ಸಾರ್ವಜನಿಕರಿಗೆ ಧೈರ್ಯ,ಆತ್ಮವಿಶ್ವಾಸ ತುಂಬಿ ಮಾತನಾಡಿದರು.
B.Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಕುರಿತು ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾಪವನ್ನು ಸಲ್ಲಿಸಲಾಗಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಮಲೆನಾಡಿನ ಸೂಕ್ಷ್ಮ ಪರಿಸರ ಹಾಗೂ ಜನರ ಹಿತಾಸಕ್ತಿಗೆ ಧಕ್ಕೆ ತರುವ ಯಾವುದೇ ಯೋಜನೆಗೂ ನಮ್ಮ ಸ್ಪಷ್ಟ ವಿರೋಧವಿದ್ದು, ಈ ಪ್ರಸ್ತಾಪವನ್ನು ಸಂಪೂರ್ಣವಾಗಿ ಕೈಬಿಡುವಂತೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲಾಗುವುದು. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜನಸಮುದಾಯಕ್ಕೆ ತಿಳಿಸಿದರು.
