Adichunchanagiri Education Trust ವೃತ್ತಿಗೆ ಗೌರವ ಕೊಡಿ, ಯಾವ ವ್ಯಕ್ತಿ ವೃತ್ತಿಗೆ ಗೌರವ ಕೊಡುತ್ತಾನೋ ಆ ವ್ಯಕ್ತಿಯ ಬದುಕು ಹಸನಾಗುವುದು, ಪ್ರತಿಯೊಬ್ಬ ಶಿಕ್ಷಕರು ಮಕ್ಕಳ ಜೊತೆ ಉತ್ತಮ ಒಡನಾಟದಿಂದ ಇರಬೇಕು, ಅವರಿಗೆ ಬೇಕು-ಬೇಡಗಳ ಬಗ್ಗೆ ತಿಳಿದು ತರಬೇತಿ ಕೊಟ್ಟಾಗ ಮಾತ್ರ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಶಿಕ್ಷಕರ ಕಾರ್ಯಗಾರದ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.
ಅವರು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆಯ, ಶರಾವತಿ ನಗರದ ಬಿಜಿಎಸ್ ವಸತಿ ಶಾಲೆಯ ಬಿಜಿಎಸ್ ಸಭಾ ಭವನದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ವ್ಯಾಪ್ತಿಯ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ಹಾಗೂ ಕಾಲೇಜಿನ ಉಪನ್ಯಾಸಕರಿಗೆ ಎರಡು ದಿನ ನಡೆಯುವ ಕಾರ್ಯಗಾರದಲ್ಲಿ ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ,
ಒಂದು ಶಾಲೆಯಲ್ಲಿ ಮಕ್ಕಳಲ್ಲಿ ಶಿಸ್ತು, ಸಂಯಮ, ಇದೆ ಅಂದರೆ ಅದಕ್ಕೆ ಶಿಕ್ಷಕರ ಪಾತ್ರ ದೊಡ್ಡದು, ಪೋಷಕರ ಜೊತೆಗೆ ಆತ್ಮೀಯತೆಯಿಂದ ಇರಬೇಕು ಎಂದರು. ಈಗಾಗಲೇ ರಾಜ್ಯದ ನುರಿತ ವಿವಿಧ ಶಿಕ್ಷಣ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಂಪನ್ಮೂಲ ವ್ಯಕ್ತಿಗಳಿಂದ ತಮಗೆ ಕಾರ್ಯಾಗಾರ ನಡೆಸುತ್ತಿದ್ದು,ಇದರ ಸದುಪಯೋಗ ಪಡೆದುಕೊಂಡು, ತಮ್ಮ ವಿದ್ಯಾರ್ಥಿಗಳಿಗೆ ತರಬೇತಿಯನ್ನು ಕೊಟ್ಟು ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಂದ ತಾವು ಉತ್ತಮ ಸಾಧನೆ ಮಾಡಿಸಬೇಕಾಗಿದೆ ಎಂದು ಶಿಕ್ಷಕರಿಗೆ ಕಿವಿ ಮಾತು ತಿಳಿಸಿದರು.
ಈ ಕಾರ್ಯಗಾರದಲ್ಲಿ ಸಂಸ್ಥೆಯ ವಿವಿಧ ಶಾಲೆಗಳಿಂದ ಸುಮಾರು 600 ಕ್ಕೂ ಹೆಚ್ಚು ವಿವಿಧ ವಿಷಯಗಳ ಶಿಕ್ಷಕರು,ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಪಡೆಯುತ್ತಿರುವುದು ಮತ್ತೊಂದು ವಿಶೇಷ.
Adichunchanagiri Education Trust ಈ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೂಜ್ಯ ಶ್ರೀ ಸಂವಿಧಾನನಂದನಾಥ ಸ್ವಾಮೀಜಿಯವರು,ಪೂಜ್ಯ ಶ್ರೀ ರಾಜಯೋಗಾನಂದನಾಥ ಸ್ವಾಮೀಜಿಯವರು ಉಪಸ್ಥಿತರಿದ್ದರು.
ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು. ನಿವೃತ್ತ ಜಂಟಿ ನಿರ್ದೇಶಕರಾದ ಪಾಂಡುರಂಗಯ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ, ಮೌಲ್ಯ ಮಾಪನಗಳ ಬಗ್ಗೆ, ಪರೀಕ್ಷೆ, ಶೈಕ್ಷಣಿಕ ಚಟುವಟಿಗಳ ಬಗ್ಗೆ ಕುರಿತು ಶಿಕ್ಷಕರಿಗೆ ತಿಳಿಸಿದರು. ಪ್ರಗತಿಯಲ್ಲಿ ಹಿಂದೆ ಉಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನೀಡಿ, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಒತ್ತು ಕೊಡಬೇಕು ಎಂದರು.ಮಕ್ಕಳಿಗೆ ತರಬೇತಿ, ಉತ್ತಮ ಕೌಶಲ್ಯಗಳನ್ನು ಗುರುತಿಸಿ ಆಯ್ಕೆ ಮಾಡುವುದು, ನಿರಂತರ ಅಭ್ಯಾಸ ಮಾಡುವುದರ ಮೂಲಕ ಅವರ ಸಾಧನೆಗೆ ಶಕ್ತಿ ತುಂಬುವುದು, ಮಕ್ಕಳಲ್ಲಿ ಅನೇಕ ನ್ಯೂನ್ಯತೆಗಳಿರುತ್ತವೆ, ಅವುಗಳನ್ನು ತಿದ್ದಿ-ತೀಡಿ ಉತ್ತಮ ರೀತಿಯಲ್ಲಿ ಒಬ್ಬ ಪ್ರಜ್ಞಾವಂತರಾಗಿ ಸಜ್ಜುಗೊಳಿಸುವುದರಲ್ಲಿ ತಮ್ಮಗಳ ಪಾತ್ರ ದೊಡ್ಡದು ಎಂದರು.
ಸಂಪನ್ಮೂಲ ವ್ಯಕ್ತಿಗಳಾದ ಪುಷ್ಪರಾಜ್, ವೆಂಕಟೇಶ್, ಗುರುಮೂರ್ತಿ, ಆಂಜನೇಯ,ಎಂ. ಕರಿಬಸಪ್ಪ, ಮೋತಿನಾಯ್ಕ, ಪ್ರದೀಪ್, ರುದ್ರಸ್ವಾಮಿ,ದಿವಾಕರ್, ಬಸವರಾಜ್, ರಂಗರಾಜು, ವಸಂತಕುಮಾರ್ ಪೈ, ನಂಜರಾಜ, ಬಸವಣ್ಣ, ಸುಧಾ ಹೆಗಡೆ, ಶ್ರೀ ಕಾಂತ್, ಪ್ರಜ್ವಲ್, ಕಾಂತರಾಜು, ಸತೀಶ್, ನಾಗರಾಜು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಶಿಕ್ಷಕರಿಗೆ ಎರಡು ದಿನ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಕೊಳಿಗೆ ವಾಸಪ್ಪಗೌಡ,ಸಂಸ್ಥೆಯ ಪ್ರಾಂಶುಪಾಲರುಗಳು, ಮುಖ್ಯ ಶಿಕ್ಷಕರು, ಉಪನ್ಯಾಸಕರು, ಶಿಕ್ಷಕರು ಇನ್ನು ಮುಂತಾದವರು ಉಪಸ್ಥಿತರಿದ್ದರು.
Adichunchanagiri Education Trust ವೃತ್ತಿಗೆ ಗೌರವಕೊಡಿ, ಅದರಿಂದ ವ್ಯಕ್ತಿಯ ಬದುಕು ಹಸನಾಗುತ್ತದೆ : ಶ್ರೀಪ್ರಸನ್ನನಾಥಶ್ರೀ
Date:
