Friday, May 22, 2026
Friday, May 22, 2026

Belur Gopala Krishna ದೆಹಲಿ‌ಗೆ ನಮ್ಮ ತಂಡ ಹೋಗಲಿದೆ. ನಮ್ಮದು ಸಂಪುಟಕ್ಕೆ ಸೇರಲು ಮಾಡು ಇಲ್ಲವೆ ಮಡಿ ಹೋರಾಟ – ಬೇಳೂರು ಗೋಪಾಲ ಕೃಷ್ಣ

Date:

Belur Gopala Krishna ಕಾಂಗ್ರೆಸ್ ಶಾಸಕರ ದೆಹಲಿ ಪ್ರವಾಸದ ಕುರಿತು ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಕೇರಳ ಮುಖ್ಯಮಂತ್ರಿ ಆಯ್ಕೆ ನಂತರವೇ ದೆಹಲಿಗೆ ತೆರಳುವ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಹೇಳಿದರು. ಈಗ ಕೇರಳ ಸಿಎಂ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಮುಂದಿನ 2 ರಿಂದ 3 ದಿನಗಳಲ್ಲಿ ಸಭೆ ನಡೆಸಿ ಸುಮಾರು 30 ರಿಂದ 35 ಮಂದಿ ಶಾಸಕರು ದೆಹಲಿಗೆ ತೆರಳಲಿದ್ದಾರೆ ಎಂದರು.

ಈ ಬಾರಿ “ಮಾಡು ಇಲ್ಲವೇ ಮಡಿ” ಹೋರಾಟದ ರೀತಿಯಲ್ಲಿ ನಮ್ಮ ಹೋರಾಟ ಇರಲಿದೆ ಎಂದು ಸ್ಪಷ್ಟಪಡಿಸಿದ ಅವರು, ಮೂರು ವರ್ಷಗಳಿಂದ ಕೆಲವರು ಅಧಿಕಾರ ಅನುಭವಿಸಿದ್ದಾರೆ. ಈಗ ಪಕ್ಷವನ್ನು ಇನ್ನಷ್ಟು ಶಕ್ತಿಯುತಗೊಳಿಸಲು ಸಂಪುಟ ಪುನಾರಚನೆ ಅಗತ್ಯವಾಗಿದೆ ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಈಗಾಗಲೇ 15 ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತು ಹೇಳಿದ್ದಾರೆ. ಆದರೆ ನಾವು 20ಕ್ಕೂ ಹೆಚ್ಚು ಮಂದಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದೇವೆ ಎಂದು ಹೇಳಿದರು.


Belur Gopala Krishna “ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಮಂದಿ ದೆಹಲಿಗೆ ಹೋಗ್ತೀವಿ. ಖಂಡಿತವಾಗಿಯೂ ಸಂಪುಟ ಪುನಾರಚನೆ ಆಗಬೇಕು. ಬಹಳಷ್ಟು ಜನ ಕಾಯುತ್ತಿದ್ದಾರೆ. ಅವರೇ ಇರಬೇಕು ಅಂತಿಲ್ಲ. ಆರು ತಿಂಗಳು ಹೆಚ್ಚುವರಿಯಾಗಿ ಇದ್ದಾರೆ. ಪಕ್ಷ ಶಕ್ತಿಯುತವಾಗಬೇಕಾದರೆ ಬದಲಾವಣೆ ಅಗತ್ಯ,” ಎಂದು ಬೇಳೂರು ಗೋಪಾಲಕೃಷ್ಣ ಹೇಳಿದರು. ಮೇ 28 ಮತ್ತು 29ರೊಳಗೆ ದೆಹಲಿ ಭೇಟಿ ನಿಶ್ಚಯವಾಗಿದ್ದು, 15 ದಿನಗಳೊಳಗೆ ಅವಕಾಶ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟದ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಿಎಂ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ರಾಷ್ಟ್ರೀಯ ನಾಯಕರ ಕೈಯಲ್ಲಿರುವ ವಿಷಯ. ಅದಕ್ಕೆ ಸಂಬಂಧಿಸಿದಂತೆ ನಾವು ಏನೂ ಹೇಳುವುದಿಲ್ಲ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga jyanendra ಉಪಲೋಕಾಯುಕ್ತರ ಅನಿಸಿಕೆ ಸರಿ. ರಾಜ್ಯದಲ್ಲಿ ಭ್ರಷ್ಠಾಚಾರದ ತಾಂಡವ- ಆರಗ ಜ್ಞಾನೇಂದ್ರ

Araga jyanendra ಕರ್ನಾಟಕದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಉಪ ಲೋಕಾಯುಕ್ತ ಬಿ...

Backward Classes Welfare Department ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2026-27...

Nidhi Apke Nikat ಮೇ 27 .ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ನಿಧಿ ಆಪ್ ಕೆ ನಿಕಟ್ 2.0 ಕಾರ್ಯಕ್ರಮ

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ...

Shivamogga Police ಅನಾಮಧೇಯ ಶವದ ವಾರಸುದಾರರ ಪತ್ತೆಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ

Shivamogga Police ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್...