Wednesday, September 9, 2026
Wednesday, September 9, 2026

Institute of International Finance ಐಐಎಫ್ ಶಿವಮೊಗ್ಗ ಚಾಪ್ಟರ್ ನ ನೂತನ ಪದಾಧಿಕಾರಿಳ ಆಯ್ಕೆ.

Date:

Institute of International Finance ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ (IIF) ಶಿವಮೊಗ್ಗ ಚಾಪ್ಟರ್‌ನ 2026 ರಿಂದ 2028ರ ದ್ವೈವಾರ್ಷಿಕ ಅವಧಿಗೆ ನೂತನ ಕೌನ್ಸಿಲ್ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮಲ್ನಾಡ್ ಅಲಾಯ್ ಕಾಸ್ಟಿಂಗ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಾದ ಶ್ರೀ ಮಹಾವೀರ್ ಜೈನ್ ಅವರು ನೂತನ ಕೌನ್ಸಿಲ್‌ನ ಅಧ್ಯಕ್ಷರಾಗಿ (Chairman) ಮತ್ತು ಸ್ಮಿತಾ ಎಂಟರ್‌ಪ್ರೈಸಸ್‌ನ ಮಾಲೀಕರಾದ ಶ್ರೀ ಎಂ. ಎಸ್. ಅರುಣ್ ಅವರು ಉಪಾಧ್ಯಕ್ಷರಾಗಿ (Vice Chairman) ಅಧಿಕಾರ ವಹಿಸಿಕೊಂಡಿದ್ದಾರೆ. ರಾಜ್ದೀಪ್ ಇಂಡಸ್ಟ್ರೀಸ್‌ನ ಪಾಲುದಾರರಾದ ಶ್ರೀ ಪ್ರದೀಪ್ ಆರ್. ಅವರು ಗೌರವಾನ್ವಿತ ಕಾರ್ಯದರ್ಶಿಯಾಗಿ ಹಾಗೂ ರಾಗ್ ಎಂಟರ್‌ಪ್ರೈಸಸ್‌ನ ಮಾಲೀಕರಾದ ಶ್ರೀ ಆನಂದ್ ಕೋಟಿ ಎಚ್. ಆರ್. ಅವರು ಗೌರವಾನ್ವಿತ ಖಜಾಂಚಿಯಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
Institute of International Finance ನೂತನ ಕೌನ್ಸಿಲ್‌ನ ಸದಸ್ಯರಾಗಿ ಶಿವಮೊಗ್ಗದ ಪ್ರಮುಖ ಕೈಗಾರಿಕೋದ್ಯಮಿಗಳು ಮತ್ತು ತಜ್ಞರು ಆಯ್ಕೆಯಾಗಿದ್ದಾರೆ. ಶಾಂತಲಾ ಸ್ಫೆರೋಕಾಸ್ಟ್ ಪ್ರೈವೇಟ್ ಲಿಮಿಟೆಡ್‌ನ ಹೆಚ್.ಆರ್. ವ್ಯವಸ್ಥಾಪಕರಾದ ಶ್ರೀ ನಂಜುಂಡೇಶ್ವರ ಹೆಚ್. ಬಿ., ಎಸ್‌ಎನ್‌ಎಸ್ ಅಲಾಯ್ ಕಾಸ್ಟಿಂಗ್ಸ್‌ನ ಪಾಲುದಾರರಾದ ಶ್ರೀ ಚಂದನ್ ಎನ್. ಹೊಳ್ಳ, ಶ್ರೀ ವಾಸವಿ ಫೌಂಡ್ರಿ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಾದ ಶ್ರೀ ಸುರೇಶ್ ಎಂ. ಹಾಗೂ ಟೆಕ್ನೋ ರಿಂಗ್ಸ್‌ನ ಪಾಲುದಾರರಾದ ಶ್ರೀ ಭೂಪಾಳಂ ಸತ್ಯನಾರಾಯಣ ಭಾರತ್ ಅವರು ಕೌನ್ಸಿಲ್ ಸದಸ್ಯರಾಗಿ ಸೇವೆ ಸಲ್ಲಿಸಲಿದ್ದಾರೆ.ಇವರೊಂದಿಗೆ ಪರ್ಲೈಟ್ ಲೈನರ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕರಾದ ಶ್ರೀ ಅಕ್ಷಯ್ ದತ್ ಜೆ., ಬಸವಶ್ರೀ ಎಂಟರ್‌ಪ್ರೈಸಸ್‌ನ ಪಾಲುದಾರರಾದ ಶ್ರೀ ಮಂಜಪ್ಪ ಎಚ್. ಎಸ್., ಜೆ.ಎನ್.ಎನ್. ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಶಾಂತಿ ಕಿರಣ್ ಎಂ. ಮತ್ತು ಸಿತಾಸ್ -ಎನ್‌ಡಿಟಿ ಎಂಜಿನಿಯರ್ಸ್ ಪ್ರೈವೇಟ್ ಲಿಮಿಟೆಡ್‌ನ ಜನರಲ್ ಮ್ಯಾನೇಜರ್ ಆದ ಶ್ರೀ ಲೋಕೇಶ್ ಎಚ್. ಎಸ್. ಅವರು ಕೌನ್ಸಿಲ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...