Tuesday, September 8, 2026
Tuesday, September 8, 2026

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Date:

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ ಜೀವ ವೈವಿದ್ಯ ಪ್ರಶಸ್ತಿಗೆ ಶ್ರೀಮತಿ ಶ್ರಾವ್ಯಾ ಸಾಗರ್ ಅವರು ಭಾಜನರಾಗಿದ್ದಾರೆ. ಶ್ರಾವ್ಯಾ ಸಾಗರ್ ನಿರ್ಮಿಸಿದ ವರದಾನದಿ ಜೀವವೈವಿದ್ಯ ಸಾಕ್ಷ್ಯಚಿತ್ರವನ್ನು ೨೦೨೫-೨೬ನೇ ಸಾಲಿನ ರಾಜ್ಯಮಟ್ಟದ ಉತ್ತಮ ಜೀವವೈವಿದ್ಯ ಸಾಕ್ಷ್ಯ ಚಿತ್ರವೆಂದು ಪರಿಗಣಿಸಿ ದಿನಾಂಕ: 22-05-2026ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಅಂತಾರಾಷ್ಟ್ರೀಯ ಜೀವವೈವಿದ್ಯ ಕಾರ್ಯಕ್ರಮದಲ್ಲಿ ಮಾನ್ಯ ಅರಣ್ಯ, ಜೀವಪರಿಸರ ಮತ್ತು ಪರಿಸರ ಮಂತ್ರಿಗಳಾದ ಶ್ರೀ ಈಶ್ವರ ಖಂಡ್ರೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.
Eshwara Khandre ಸಾಗರ ತಾ ಚಿಪ್ಪಳ್ಳಿ ಗ್ರಾಮದ ಪ್ರಗತಿಪರ ಕೃಷಿಕರಾದ ನಾಗೇಂದ್ರ ಸಾಗರ್ ಮತ್ತು ವಾಣಿಶ್ರೀ ದಂಪತಿಗಳ ಪುತ್ರಿ ಶ್ರಾವ್ಯಾ ವೃತ್ತಿಯಲ್ಲಿ ವಕೀಲರು. ಗ್ರಾಮಾಂತರ ಸಮುದಾಯ ವಿಜ್ಞಾನಕೇಂದ್ರ ಶೆಡ್ತಿಕೆರೆ ಇವರ ಸಹಕಾರ, ಮತ್ತು ಕೆ. ವೆಂಕಟೇಶ್ ಕವಲಕೋಡು ಇವರ ಮಾರ್ಗದರ್ಶನದಲ್ಲಿ ಸಾಕ್ಷ್ಯಚಿತ್ರವನ್ನು ನಿರ್ಮಿಸಲಾಗಿದೆ. ವೃಕ್ಷ ಲಕ್ಷ ಆಂದೋಲನ-ಕರ್ನಾಟಕ ಮತ್ತು
ಶಡ್ತಿಕೆರೆ ಸಮುದಾಯ ವಿಜ್ಞಾನ ಕೇಂದ್ರದ ಅಧ್ಯಕ್ಷ, ಸದಸ್ಯರುಗಳು ಶ್ರೀಮತಿ ಶ್ರಾವ್ಯಾ ಅವರನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...