Shimoga News ನಗರದ ತೃಪ್ತಿ ಹೆಲ್ತ್ ಕೇರ್ ಆಶ್ರಯದಲ್ಲಿ ಇಲ್ಲಿನ ಹೋಂ ಗಾರ್ಡ್ ಅವರಿಗಾಗಿ ಆಯೋಜಿಸಿದ್ದ ಉಚಿತ ಮೂತ್ರ ರೋಗ, ಮೂತ್ರ ಕೋಶ ತಪಾಸಣೆ ಮತ್ತು ಮಾಹಿತಿ ಕಾರ್ಯಕ್ರಮವು ಆಸ್ಪತ್ರೆ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮೂತ್ರ ರೋಗದ ತಜ್ಞ ಡಾ| ಚಂದ್ರಶೇಖರ್ ಅವರು, ಆರೋಗ್ಯವೇ ಭಾಗ್ಯ, ಆರೋಗ್ಯವಿಲ್ಲ ದಿದ್ದರೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬರು ಆರೋ ಗ್ಯದ ಕಡೆ ಹೆಚ್ಚು ಗಮನ ಕೊಡಬೇಕು. ಜೊತೆಗೆ ಪ್ರತಿ ೪೦ವರ್ಷ ದಾಟಿದವರು ಪ್ರತಿ ತಿಂಗಳಿಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.
Shimoga News ಶಿವಮೊಗ್ಗದ ದುರ್ಗೀಗುಡಿ ಯಲ್ಲಿರುವ ನಮ್ಮ ಸೆಂಟರ್ನಲ್ಲಿ ಆರ್ಥಿಕವಾಗಿ ಸಂಕಷ್ಠದಲ್ಲಿರುವವರಿಗೆ ಉಚಿತವಾಗಿ ಮೂತ್ರ ರೋಗ, ಬಿ.ಪಿ. ಕಿಡ್ನಿ, ಮಧುಮೇಹ ಮತ್ತಿತರ ತಪಾಸಣೆಗಳನ್ನು ನಡೆಸಲಾಗುತ್ತಿದ್ದು, ರೋಗಿಗಳು ಇದರ ಸದುಪಯೋಗ ಪಡೆಯಲು ತಿಳಿಸಿದರು.
ತಪಾಸಣೆಯಲ್ಲಿ ಸಾಕಷ್ಟು ಜನ ಪ್ರಯೋಜನ ಪಡೆದರು. ಹೆಲ್ತ್ ಕೇರ್ನ ಸುಶ್ಮಾ, ರಕ್ಷಿತಾ ಮತ್ತು ಮಾರ್ಕೇಟಿಂಗ್ ಎಕ್ಸಿಕ್ಯೂಟಿವ್ ಸುನಿಲ್ ಉಪಸ್ಥಿತರಿದ್ದರು.
