Wednesday, September 9, 2026
Wednesday, September 9, 2026

ಕ್ರಿಕೆಟ್ ಆಡುವಾಗಲೇ ಕುಸಿದು ಅಸು ನೀಗಿದ ಕ್ರಿಕೆಟ್ ಪಟು ಅಕ್ಷಯ್

Date:

ಮಾಜಿ ರಣಜಿ ಕ್ರಿಕೆಟ್ ಆಟಗಾರ ಅಕ್ಷಯ್ ಎಸ್.ಎಲ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಎಸ್ ಎಲ್ ಎಸ್ ಕ್ರೀಡಾಂಗಣದಲ್ಲಿ ನಡೆದ ಕೆಎಸ್‌ಸಿಎ 3ನೇ ಡಿವಿಜನ್ ಲೀಗ್ ಪಂದ್ಯದಲ್ಲಿ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ನಿನ್ನೆ ಮಧ್ಯಾಹ್ನ ಪಂದ್ಯ ನಡೆಯುತ್ತಿರುವಾಗ ಅಕ್ಷಯ್ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದು, ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನ ಕ್ರಿಕೆಟ್ ವಲಯದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ.

ಮೃತ ಅಕ್ಷಯ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ. ಶಿವಮೊಗ್ಗ ನಗರದ ಅರವಿಂದ ನಗರದಲ್ಲಿರುವ ಅವರ ನಿವಾಸದಲ್ಲಿ ಕುಟುಂಬಸ್ಥರು ಮತ್ತು ಆಪ್ತರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಇಂದು ಮಧ್ಯಾಹ್ನ ಶಿವಮೊಗ್ಗದ ನವುಲೆಯಲ್ಲಿ ಇರುವ ಕೆ ಎಸ್ ಸಿ ಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ ಒಂದು ಗಂಟೆಯಿಂದ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ.

ಅಕ್ಷಯ್ ಎಸ್.ಎಲ್ ಅವರ ನಿಧನಕ್ಕೆ ಕ್ರೀಡಾಪಟುಗಳು, ಅಭಿಮಾನಿಗಳು ಹಾಗೂ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...