Tuesday, May 26, 2026
Tuesday, May 26, 2026

High Court ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ. ಮೆಡಿಕಲ್ ಐಕಾನ್ಸ್ ಸೇವಾತಂಡದ ಆಗ್ರಹ.

Date:

High Court ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡ ಬೇಕು ಎಂದು ಆಗ್ರಹಿಸಿ
ಮೆಡಿಕಲ್ ಐಕಾನ್ಸ್ ಸಾಮಾಜಿಕ ಸ್ವಯಂ ಸೇವಾ ತಂಡದ ವತಿಯಿಂದ ಇಂದು ಜಿಲ್ಲಾಧಿಕಾರಿ ಗಳ ಮೂಲಕ
ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಮಧ್ಯ ಕರ್ನಾಟಕ ಭಾಗದ ಜನರಿಗೆ ನ್ಯಾಯಾಂಗ ಸೇವೆಗಳು ಸುಲಭವಾಗಿ ದೊರಕುವ ಉದ್ದೇಶದಿಂದ ಶಿವಮೊಗ್ಗ ದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡುವುದು ಅತ್ಯಂತ ಅಗತ್ಯವಾಗಿದೆ ಎಂದು ಮನವಿದಾರರು ತಿಳಿಸಿದರು.

High Court ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಸೇರಿದಂತೆ ಮಧ್ಯಕರ್ನಾಟಕ ಭಾಗದ ನಾಗರೀಕರು ಹೈಕೋರ್ಟ್ ಸಂಬಂಧಿತ ಪ್ರಕರಣಗಳು ಮೇಲ್ಮನವಿ ಅರ್ಜಿಗಳು, ಕಾನೂನು ವ್ಯವಹಾರಗಳು, ಹಾಗೂ ಇತರೆ ನ್ಯಾಯಾಂಗ ವಿಚಾರಗಳಿಗಾಗಿ ದೂರದ ಮಂಗಳೂರಿಗೆ ಅಥವಾ ಬೆಂಗಳೂರಿಗೆ ತೆರಳಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ ಇದರಿಂದ ಸಾರ್ವಜನಿಕರಿಗೆ ಆರ್ಥಿಕ, ಸಮಯ ಹಾಗೂ ದೂರದ ಪ್ರಯಾಣದ ತೊಂದರೆಗಳು ಹೆಚ್ಚಾಗುತ್ತಿದೆ ಎಂದು ಮನವಿದಾರರು ತಿಳಿಸಿದರು.
ಮಧ್ಯ ಕರ್ನಾಟಕದ ಶಿವಮೊಗ್ಗ ಭಾಗವು ಶಿಕ್ಷಣ, ಆರೋಗ್ಯ, ವ್ಯಾಪಾರ ಹಾಗೂ ಆಡಳಿತಾತ್ಮಕವಾಗಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಪ್ರದೇಶವಾಗಿದ್ದು ಇಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾದರೆ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ ಈಗಾಗಲೆ ರಾಜ್ಯದ ಇತರೆ ಭಾಗಗಳಿಗೆ ನೀಡಿರುವಂತೆ ಶಿವಮೊಗ್ಗಕ್ಕೂ ನ್ಯಾಯಯುತ ಆದ್ಯತೆ ನೀಡಬೇಕಾಗಿದೆ ಆದುದ್ದರಿಂದ ಶಿವಮೊಗ್ಗ ಜಿಲ್ಲೆಯ ಹಾಗೂ ಮಧ್ಯ ಕರ್ನಾಟಕ ಭಾಗದ ಜನರ ಹಿತ ದೃಷ್ಠಿಯಿಂದ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಲಾಗಿದೆ.
ಇದಕ್ಕೂ ಮೊದಲು ಮನವಿದಾರರು ಕೋರ್ಟ್ ಹಿಂಭಾಗದಲ್ಲಿ ಹಲವು ದಿನಗಳಿಂದ ವಕೀಲರು ನೆಡೆಸುತ್ತಿರುವ ಹೋರಾಟ ಸ್ಥಳಕ್ಕೆ ತೆರಳಿ ತಮ್ಮ ಬೆಂಬಲ ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿ, ಮೆಡಿಕಲ್ ಐಕಾನ್ಸ್ ನ ಸಾಮಾಜಿಕ ಸ್ವಯಂ ಸೇವಾ ತಂಡದ ಗೌರವ ಅಧ್ಯಕ್ಷ ಹೇಮರಾಜ್ ಜಿ ಎಚ್ ,ಅಧ್ಯಕ್ಷ ಮಂಜುನಾಥ್ ಎಂಎಲ್, ಉಪಾಧ್ಯಕ್ಷ ಜಯರಾಜ್,ಸತೀಶ್
ಸಂಘಟನಾ ಕಾರ್ಯದರ್ಶಿ ಗುರುರಾಜ್ .ಎಲ್ ಪದಾಧಿಕಾರಿಗಳಾದ ಸತೀಶ್, ಗಿರೀಶ್ ಮಸರೂರು,
ಮಂಜುನಾಥ್ ಬಿ , ಮಧು ಕೆ.ಜಿ ಅಶೋಕ್, ಶಫಿ ,ಭವಾನಿ ರಾಜ್ ಸಿಂಧ್ಯ, ಉಮೇಶ್, ರಘು ಸೇರಿದಂತೆ ಹಲವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

International Day for Biological Diversity ಪ್ಲಾಸ್ಟಿಕ್ ಹಾವಳಿ: ನಿತ್ಯ ಸಾವಿರಾರು ಜೀವಿಗಳುನಾಶ- ಡಾ.ನಾಗರಾಜ್ ಪರಿಸರ.

International Day for Biological Diversity ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆಯನ್ನು ಶಿವಮೊಗ್ಗದ...

Youth Hostel Association ಹಿಮಾಲಯ ಚಾರಣ: ಶಿವಮೊಗ್ಗದ ವಿಜೇಂದ್ರ ರಾವ್ & ಎಮ್.ಕೆ .ಜ್ಯೋತಿ ಅವರಿಗೆ ತಂಡಗಳ ನಾಯಕತ್ವ.

Youth Hostel Association ಶಿವಮೊಗ್ಗ ನಗರದ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ...

Diploma Admission ಸಹಕಾರ ಡಿಪ್ಲೊಮಾ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನ.

Diploma Admission ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್‌ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಶಿವಮೊಗ್ಗ ಇವರ ವತಿಯಿಂದ...

Breaking News ಕ್ರಿಕೆಟ್ ಪಟು ಅಕ್ಷಯ್ ನಿಧನಕ್ಕೆ ಭಗೀರಥ ಸ್ಪೋರ್ಟ್ಸ್ ಅಕಾಡೆಮಿ ಸಂತಾಪ.

Breaking News ಕ್ರಿಕೆಟ್ ಆಟ ಆಡುವಾಗಲೇ ರಣಜಿ ಕ್ರಿಕೆಟ್ ನ ಮಾಜಿ...