Wednesday, May 27, 2026
Wednesday, May 27, 2026

ಮದುವೆಯಾಗಿ 18ದಿನದಲ್ಲೇ ಹೃದಯಾಘಾತ!. ಕಾನ್ಸ್ಟೇಬಲ್ ಈರಣ್ಣ ಸಾವು

Date:

ಶಿವಮೊಗ್ಗದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ 8ನೇ ಪಡೆಯ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಈರಣ್ಣ ಗುಡಾದಾರ್, 26 ವರ್ಷ ಅವರು ಮಂಗಳವಾರದಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನವರಾಗಿದ್ದು, ಕಳೆದ 7 ವರ್ಷಗಳಿಂದ ಶಿವಮೊಗ್ಗದ ಕೆಎಸ್ಆರ್‌ಪಿ 8ನೇ ಪಡೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೇ 26ರಂದು ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದಾಗ ತಕ್ಷಣ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಮೃತ ಈರಣ್ಣ ಅವರಿಗೆ ಕೇವಲ 18 ದಿನಗಳ ಹಿಂದೆಯಷ್ಟೇ ವಿವಾಹವಾಗಿತ್ತು ಎನ್ನಲಾಗಿದ್ದು, ಮೃತರು ಪತ್ನಿ, ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಸಂತಾಪ:
ಯುವ ಪೊಲೀಸ್ ಸಿಬ್ಬಂದಿಯ ಅಕಾಲಿಕ ನಿಧನಕ್ಕೆ ಕೆಎಸ್ಆರ್‌ಪಿ 8ನೇ ಪಡೆಯ ಕಮಾಂಡೆಂಟ್ ಆದ ಎಸ್. ಯುವಕುಮಾರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಕಮಾಂಡೆಂಟ್ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ 2. ಭದ್ರಾವತಿ ಆಕಾಶವಾಣಿಯಿಂದ” ಬಾನುಲಿ ಬರಹ ” ವಿಶೇಷ ಕಾರ್ಯಾಗಾರ

Akashavani Bhadravati ಭಾರತದ ಸಾರ್ವಜನಿಕ ಪ್ರಸಾರ ಸೇವೆ ಸಂಸ್ಥೆಯಾದ ಪ್ರಸಾರ ಭಾರತಿಯ...

JCI Institute ಯುವ ನಾಯಕತ್ವ ಬೆಳವಣಿಗೆಯಲ್ಲಿ ಜೆಸಿಐ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ- ವಿಜಯಲಕ್ಷ್ಮಿ ಕಡಂಬ.

JCI Institute ಸ್ಥಳೀಯ ಸಮಾಜಮುಖಿ ಕಾರ್ಯಗಳಲ್ಲಿ ಹಾಗೂ ಯುವ ನಾಯಕತ್ವದ ಬೆಳವಣಿಗೆಯಲ್ಲಿ...

B.Y. Vijayendra ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ. ಅವಧಿಗೆ ಮುನ್ನವೇ ಚುನಾವಣೆ- ಬಿ.ವೈ.ವಿಜಯೇಂದ್ರ

B.Y. Vijayendra ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ದೆಹಲಿಯಲ್ಲಿ...