B.Y. Raghavendra ಶಿಕಾರಿಪುರ ತಾಲ್ಲೂಕಿನ ರೈತ ಬಾಂಧವರ ಹಾಗೂ ಸಾರ್ವಜನಿಕರ ದಶಕಗಳ ಪ್ರಮುಖ ತೊಂದರೆಗೆ ಕಾರಣವಾಗಿರುವ ಡೀಮ್ಡ್ ಫಾರೆಸ್ಟ್ (ಭಾವಿತ ಅರಣ್ಯ) ಸಮಸ್ಯೆಗೆ ತಾರ್ಕಿಕ ಹಾಗೂ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಿಕಾರಿಪುರದಲ್ಲಿ ಒಂದು ಮಹತ್ವದ ಜಂಟಿ ಸಮಾಲೋಚನಾ ಸಭೆಯನ್ನು ಸಂಸದ ಬಿ.ವೈ.ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಉನ್ನತ ಮಟ್ಟದ ಸಭೆಯು ಶಿಕಾರಿಪುರ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಮತ್ತು ಪ್ರಮುಖರಾದ ಶ್ರೀ ಕೆ.ಎಸ್. ಗುರುಮೂರ್ತಿ ಅವರ ಉಪಸ್ಥಿತಿ ಹಾಗೂ ಜಂಟಿ ನೇತೃತ್ವದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.
ಸಭೆಯಲ್ಲಿ ತಾಲ್ಲೂಕಿನ ತಹಶೀಲ್ದಾರರು, ವಲಯ ಅರಣ್ಯಾಧಿಕಾರಿಗಳು (RFO) ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಲ್ಲಿ ಬರುವ ಜಮೀನುಗಳ ವಾಸ್ತವ ಸ್ಥಿತಿಗತಿ, ಗಡಿರೇಖೆ ಗೊಂದಲ ಆಗುತ್ತಿರುವ ತಾಂತ್ರಿಕ ಲೋಪದೋಷಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
B.Y. Raghavendra ಸಭೆಯ ಕೊನೆಯಲ್ಲಿ, ಇಲಾಖೆಗಳ ನಡುವಿನ ಗೊಂದಲಗಳನ್ನು ತಕ್ಷಣವೇ ನಿವಾರಿಸಲು ಜಂಟಿ ಸರ್ವೆ ನಡೆಸಬೇಕೆಂದು ಅಧಿಕಾರಿಗಳಿಗೆ ಸಂಸದರು ಮತ್ತು ಶಾಸಕರು ನಿರ್ದೇಶನ ನೀಡಿದರು. ಇದರೊಂದಿಗೆ, ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಅರ್ಹ ಸಾಗುವಳಿ ಜಮೀನುಗಳನ್ನು ಮುಕ್ತಗೊಳಿಸಲು ಮತ್ತು ಮಲೆನಾಡಿನ ರೈತರ ಹಿತರಕ್ಷಣೆಯನ್ನು ಕಾಯ್ದುಕೊಳ್ಳಲು ಸರ್ಕಾರದ ಉನ್ನತ ಮಟ್ಟದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಕುರಿತು ಸಮಾಲೋಚಿಸಲಾಯಿತು. ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ಕಾನೂನಾತ್ಮಕವಾಗಿ ಮತ್ತು ಆಡಳಿತಾತ್ಮಕವಾಗಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಿರಂತರವಾಗಿ ಮುಂದುವರೆಸಲು ಸಭೆಯಲ್ಲಿ ನಿರ್ಧರಿಸಲಾಯಿತು
