Wednesday, July 15, 2026
Wednesday, July 15, 2026

Department of Mining Geology ಅಕ್ರಮ ಮರಳುಗಾರಿಕೆ ದಂಧೆ: ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ.

Date:

Department of Mining Geology ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಅಕ್ರಮ ಮರಳುಗಾರಿಕೆ ಕುರಿತು ನಿರಂತರವಾಗಿ ದೂರುಗಳು ಕೇಳಿಬಂದ ಹಿನ್ನೆಲೆ, ಲೋಕಾಯುಕ್ತ ನ್ಯಾಯಮೂರ್ತಿಗಳ ಆದೇಶದ ಮೇರೆಗೆ ಇಂದು ಶಿವಮೊಗ್ಗ ಜಿಲ್ಲೆಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.

ತೀರ್ಥಹಳ್ಳಿ, ಸಾಗರ, ಹೊಸನಗರ, ಭದ್ರಾವತಿ ಹಾಗೂ ಶಿವಮೊಗ್ಗ ಗ್ರಾಮಾಂತರ ಪ್ರದೇಶಗಳಲ್ಲಿ ಸುಮಾರು 15 ಸದಸ್ಯರ ಲೋಕಾಯುಕ್ತ ತಂಡ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

Department of Mining Geology ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿರುವ ಪ್ರದೇಶಗಳು ಹಾಗೂ ಸಂಗ್ರಹಿಸಿ ಇಡಲಾಗಿದ್ದ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಸ್ಥಳೀಯ ಮಟ್ಟದಲ್ಲಿ ಮಾಹಿತಿ ಸಂಗ್ರಹಿಸಿದರು.

ಇದೇ ವೇಳೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಗೂ ಭೇಟಿ ನೀಡಿದ ತಂಡ, ಸಂಬಂಧಿತ ಕಡತಗಳು ಹಾಗೂ ದಾಖಲೆಗಳನ್ನು ಪರಿಶೀಲಿಸಿತು.

ಕಾರ್ಯಾಚರಣೆಯ ವೇಳೆ ವಿಐ, ಆರ್‌ಐ, ತಹಸೀಲ್ದಾರ್, ಎಸಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿ, ಅಕ್ರಮ ಮರಳುಗಾರಿಕೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದುಕೊಂಡರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸ್ವಚ್ಛತಾ ಸಿಬ್ಬಂದಿಗಳು ಕಡ್ಡಾಯವಾಗಿ ಸುರಕ್ಷತಾ ಕವಚಗಳನ್ನು ಧರಿಸಿ ಕಾರ್ಯನಿರ್ವಹಿಸಿ- ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ "ನಗರದ ನೈರ್ಮಲ್ಯ ಹಾಗೂ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ...

B.Y. Raghavendra ಸಿಗಂದೂರು ಸೇತುವೆಗೆ ಒಂದು ವರ್ಷ: ಜನತೆಗೆ ಕನಸು ನನಸಾದ ಹರ್ಷ : ಬಿ.ವೈ.ರಾಘವೇಂದ್ರ

B.Y. Raghavendra ಐತಿಹಾಸಿಕ ಸಿಗಂದೂರು ಚೌಡೇಶ್ವರಿ ಸೇತುವೆ ರಾಷ್ಟ್ರಕ್ಕೆ ಸಮರ್ಪಣೆಯಾಗಿ ಒಂದು...