ಕಳೆದ ವಾರ ಸುರಿದ ಮಳೆಗೆ ಮನೆಯ ಗೋಡೆ ಕುಸಿದು ಹಾನಿಯಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕುಂಚೇನಹಳ್ಳಿ ಗ್ರಾಮದ ಗಂಗಾಬಾಯಿ ಎಂಬುವರಿಗೆ ಸೇರಿದ ಮನೆ ಮಳೆಯಿಂದ ಹಾನಿಯಾಗಿದ್ದು ಕುಟುಂಬಸ್ಥರು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಕಳೆದ ವಾರದ ಸುರಿದ ಅಕಾಲಿಕ ಮಳೆಯ ಗೋಡೆ ಸಂಪೂರ್ಣ ಕುಸಿದು ಬಿದ್ದಿದೆ. ಇದರಿಂದ ಮನೆಯಲ್ಲಿದ್ದ ವಸ್ತುಗಳು ಕೂಡ ಹಾನಿಯಾಗಿವೆ. ಮನೆ ಕಳೆದ ಕೊಂಡ ಕುಟುಂಬ ಬೀದಿಪಾಲಾಗಿದ್ದು ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನೆ ಮಾಲೀಕರು ಆಗ್ರಹಿಸಿದ್ದಾರೆ
ಕುಂಚೇನಹಳ್ಳಿಯಲ್ಲಿ ಮಳೆಗೆ ಮನೆ ಕುಸಿತ, ಪರಿಹಾರಕ್ಕೆ ಮನೆ ಮಾಲೀಕರ ಆಗ್ರಹ
Date:
