Thursday, September 10, 2026
Thursday, September 10, 2026

ವೃತ್ತಿ ಬದುಕಿನಲ್ಲಿ ಯಶಸ್ಸುಗಳಿಸಲು ಯುವಸದಸ್ಯರಿಗೆ ರೋಟರಿ ಸಂಸ್ಥೆ ಮಾರ್ಗದರ್ಶಿ- ಸತೀಶ್ ಚಂದ್ರ

Date:

ರೋಟರಿ ಪೂರ್ವ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಚಟುವಟಿಕೆಗಳನ್ನು ನಡೆಸುವ ಜತೆಯಲ್ಲಿ ವಿಶೇಷ ಮಾರ್ಗದರ್ಶನ ಕಾರ್ಯಕ್ರಮಗಳನ್ನು ಆಯೋಸುತ್ತಿರುವುದು ಶ್ಲಾಘನೀಯ ಎಂದು ರೋಟರಿ ಶಿವಮೊಗ್ಗ ಪೂರ್ವ ಮಾಜಿ ಅಧ್ಯಕ್ಷ ಸತೀಶ್ ಚಂದ್ರ ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಅನುಭವಿಗಳಿಂದ ಯುವ ಸದಸ್ಯರಿಗೆ ಮಾರ್ಗದರ್ಶನ ನೀಡಲು ಇಂತಹ ಕಾರ್ಯಕ್ರಮಗಳನ್ನು ಸಂಸ್ಥೆ ಆಯೋಜಿಸಿದ್ದು, ವೃತ್ತಿ ಬದುಕಿನಲ್ಲಿ ಯಶಸ್ಸು ಗಳಿಸಲು ನೆರವಾಗುತ್ತದೆ ಎಂದು ತಿಳಿಸಿದರು.

ರೋಟರಿ ಸಂಸ್ಥೆಯ ಆರ್.ಮನೋಹರ್ ಮಾತನಾಡಿ, ಸಮಾಜಮುಖಿ ಹಾಗೂ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ರೋಟರಿ ಸಂಸ್ಥೆ ನಿರಂತರ ಪ್ರೇರಣೆ ನೀಡುತ್ತದೆ ಎಂದು ಹೇಳಿದರು.

ರೋಟರಿ ಸಂಸ್ಥೆಯ ಎಚ್.ಎಸ್.ಅಜಿತ್ ಮಾತನಾಡಿ, ರೋಟರಿ ಪೂರ್ವ ಸಂಸ್ಥೆಯಲ್ಲಿ ನನ್ನನ್ನು ಸದಸ್ಯನಾಗಿ ಮಾಡುವ ಜತೆ ಹಿರಿಯರು ಮಾರ್ಗದರ್ಶನ ನೀಡುತ್ತಿರುವುದು ಸಂತಸದ ಸಂಗತಿ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಬಿ.ಆರ್.ಧನಂಜಯ ರಾಂಪುರ ಮಾತನಾಡಿ, ರೋಟರಿ ಸಂಸ್ಥೆ ಸಾಮಾಜಿಕ ಸೇವೆಗಳಲ್ಲಿ ವಿಶೇಷ ಕೆಲಸಗಳನ್ನು ಮಾಡುತ್ತಿದ್ದು, ಸದಸ್ಯರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ಹೇಳಿದರು.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ವಿಶೇಷವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಕಾಲಕಾಲಕ್ಕೆ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗಿದೆ. ಯುವಜನರಿಗೆ ಮಾರ್ಗದರ್ಶನ ನೀಡಲು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ನಿಯೋಜಿತ ಸೇನಾನಿ ಎ.ಒ.ಮಹೇಶ್, ಶ್ರೀಕಾಂತ್, ಗಣೇಶ್, ಶ್ರೀನಿವಾಸ್ ಗೌಡ, ರವಿಶಂಕರ್, ವಿಜಯ, ಜಗದೀಶ್, ಅರುಣ್ ದೀಕ್ಷಿತ್, ಶಶಿಕಾಂತ್ ನಾಡಿಗ್, ಸಂಜೀವ್, ವಿಜಯಪ್ರಕಾಶ್, ಕಾಳಾಚಾರ್ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...