Monday, June 15, 2026
Monday, June 15, 2026

Shivamogga News ಕಿರ್ಲೋಸ್ಕರ್ ಫೆರಸ್ ಇಂಡಸ್ಡ್ರೀಸ್ ನಲ್ಲಿ ವಯೋನಿವೃತ್ತಿಹೊಂದಿದ ಅಧಿಕಾರಿಗಳಿಗೆ ಬೀಳ್ಕೊಡುಗೆ.

Date:

Shivamogga News ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಆವರಣದಲ್ಲಿ ದಿನಾಂಕ 01-06-2026 ರಂದು ವಯೋನಿವೃತ್ತಿ ಹೊಂದಿದ ಕಾರ್ಮಿಕರಾದ ಶ್ರೀ ಅರ್ಜುನ್ ವಜಂತ್ರಿ ಹಾಗೂ ಶ್ರೀ ಎಸ್. ಎನ್. ಗುರುರಾಜ ಅವರ ಗೌರವಾರ್ಥವಾಗಿ ವಿದಾಯ ಸಮಾರಂಭವನ್ನು ಆಯೋಜಿಸಲಾಗಿತ್ತು.

ಶ್ರೀ ಅರ್ಜುನ್ ವಜಂತ್ರಿ ಅವರು ಮೌಲ್ಡಿಂಗ್ ವಿಭಾಗದಲ್ಲಿ ಆಪರೇಟರ್ ಆಗಿ 31 ವರ್ಷ 8 ತಿಂಗಳುಗಳ ಕಾಲ ಸಂಸ್ಥೆಗೆ ಸೇವೆ ಸಲ್ಲಿಸಿದ್ದು, ಪೌಂಡ್ರಿ ವಿಭಾಗದ ವಿವಿಧ ಘಟಕಗಳಲ್ಲಿ ಕಾರ್ಯನಿರ್ವಹಿಸಿ ತಮ್ಮ ಅನುಭವ ಮತ್ತು ಕಾರ್ಯನಿಷ್ಠೆಯಿಂದ ಗುರುತಿಸಿಕೊಂಡಿದ್ದರು. ವಿಶೇಷವಾಗಿ ಕೋರ್ ಸೆಟ್ಟಿಂಗ್ ಹಾಗೂ ಕೋರ್ ಹ್ಯಾಂಡ್ಲಿಂಗ್ ಕಾರ್ಯಗಳಲ್ಲಿ ಪರಿಣತಿ ಹೊಂದಿದ್ದ ಅವರು, ಗುಣಮಟ್ಟದ ಕೋರ್‌ಗಳನ್ನು ಸಮಯಕ್ಕೆ ಸರಿಯಾಗಿ ಮೌಲ್ಡಿಂಗ್ ವಿಭಾಗಕ್ಕೆ ಒದಗಿಸುವ ಮೂಲಕ ಉತ್ಪಾದನಾ ಪ್ರಕ್ರಿಯೆಯಲ್ಲಿ ಗಮನಾರ್ಹ ಕೊಡುಗೆ ನೀಡಿದ್ದರು.

ಅದೇ ರೀತಿ, ಶ್ರೀ ಎಸ್. ಎನ್. ಗುರುರಾಜ ಅವರು ಯುಟಿಲಿಟಿ ವಿಭಾಗದಲ್ಲಿ 31 ವರ್ಷ 10 ತಿಂಗಳುಗಳ ಕಾಲ ಸೇವೆ ಸಲ್ಲಿಸಿದ್ದು, ಕಂಪ್ರೆಸರ್‌ಗಳ ನಿರ್ವಹಣೆ ಮತ್ತು ದುರಸ್ತಿಯಲ್ಲಿ ತಮ್ಮ ಪರಿಣತಿಯನ್ನು ತೋರಿದ್ದರು. ತಮ್ಮ ತಾಂತ್ರಿಕ ಜ್ಞಾನ ಹಾಗೂ ಸಮರ್ಪಿತ ಸೇವೆಯಿಂದ ವಿಭಾಗದ ಕಾರ್ಯಕ್ಷಮತೆಯನ್ನು ಹೆಚ್ಚಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದರು.

Shivamogga News ಕಾರ್ಖಾನೆಯ ಮಾನವ ಸಂಪನ್ಮೂಲ ಮತ್ತು ಸಾಮಾನ್ಯ ಆಡಳಿತ ವಿಭಾಗವು ಈ ಸಮಾರಂಭವನ್ನು ಆಯೋಜಿಸಿತ್ತು. ಸಮಾರಂಭದಲ್ಲಿ ಪೌಂಡ್ರಿ ವಿಭಾಗದ ಹಿರಿಯ ಉಪಾಧ್ಯಕ್ಷರಾದ ಶ್ರೀ ಜಿ.ಎಸ್. ಕೃಷ್ಣಮೂರ್ತಿ, ಬೀಡುಕಬ್ಬಿಣ ವಿಭಾಗದ ಉಪಾಧ್ಯಕ್ಷರಾದ ಶ್ರೀ ಚಂದ್ರಶೇಖರ ಚಾರಿ, ಮಾನವ ಸಂಪನ್ಮೂಲ ವಿಭಾಗದ ಉಪಾಧ್ಯಕ್ಷರಾದ ಶ್ರೀ ಶಿವಯ್ಯ ಸ್ವಾಮಿ ಹಾಗೂ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಬಸವರಾಜ ಕಂಠಿ ಅವರು ನಿವೃತ್ತ ಉದ್ಯೋಗಿಗಳ ಸೇವೆ, ಸಾಧನೆ ಹಾಗೂ ಸಂಸ್ಥೆಯ ಬೆಳವಣಿಗೆಯಲ್ಲಿ ಅವರ ಕೊಡುಗೆಯನ್ನು ಸ್ಮರಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳಾದ ಶ್ರೀ ಜೆ.ಎಸ್. ಸತೀಶ್, ಶ್ರೀ ಕಿರಣ್ ಶೇಜೇಕರ್, ಕಾರ್ಮಿಕ ಸಂಘದ ಪದಾಧಿಕಾರಿಗಳು, ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಹೋದ್ಯೋಗಿಗಳು ಉಪಸ್ಥಿತರಿದ್ದು, ನಿವೃತ್ತಿ ಹೊಂದಿದ ಇಬ್ಬರು ಉದ್ಯೋಗಿಗಳಿಗೆ ಗೌರವ ಸಲ್ಲಿಸಿ ಅವರ ಮುಂದಿನ ಜೀವನ ಸುಖ, ಶಾಂತಿ ಮತ್ತು ಆರೋಗ್ಯದಿಂದ ಕೂಡಿರಲೆಂದು ಶುಭ ಹಾರೈಸಿದರು.

“ಕರ್ತವ್ಯದಲ್ಲಿ ತೋರಿದ ನಿಷ್ಠೆಯೇ ವ್ಯಕ್ತಿಯ ನಿಜವಾದ ಸಂಪತ್ತು; ನಿವೃತ್ತಿ ಸೇವೆಗೆ ಅಂತ್ಯವಾದರೂ, ಸಾಧನೆಗಳ ನೆನಪು ಎಂದೆಂದಿಗೂ ಜೀವಂತವಾಗಿರುತ್ತದೆ.”

ಮುರುಳೀಧರ್ ನಾಡಿಗೇರ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ರಾಜ್ಯದ ಎಲ್ಲಾ ಅಧಿಕಾರಿಗಳು “ಟೀಮ್ ಕರ್ನಾಟಕ” ಮನೋಭಾವದಿಂದ ಕಾರ್ಯನಿರ್ವಹಿಸಬೇಕು: ಡಿ.ಕೆ. ಶಿವಕುಮಾರ್

D.K. Shivakumar ರಾಜ್ಯದ ಅಭಿವೃದ್ಧಿ, ಭ್ರಷ್ಟಾಚಾರ ನಿರ್ಮೂಲನೆ, ಶಿಕ್ಷಣ, ಕಾನೂನು...

B.Y. Raghavendra ಕೆರೆ ಬಸವಣ್ಣ ಶೇಡಿನ ಕೆರೆ” ಲೋಕಾರ್ಪಣೆ!

B.Y. Raghavendra ಶ್ರೀ ಡಿ. ಯೇಸು ಪ್ರಕಾಶ್ ಅವರ ಸ್ಮರಣಾರ್ಥ, ಸಾರಾ...

Veerendra Heggade ಕೂಡ್ಲಿಯಲ್ಲಿ ಸಾಮಾಜಿಕಜಾಗೃತಿ ಮೂಡಿಸುವ ಬೀದಿ ನಾಟಕದ ಯಶಸ್ವಿ ಪ್ರದರ್ಶನ

Veerendra Heggade ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...