Monday, June 15, 2026
Monday, June 15, 2026

Akashavani Bhadravati ಆಕಾಶವಾಣಿ-90″ಬಾನುಲಿ ಬರಹ” ಕುರಿತು ಭದ್ರಾವತಿ ಬಾನುಲಿ ಕೇಂದ್ರದಲ್ಲಿ ವಿಶೇಷ ಕಾರ್ಯಾಗಾರ .

Date:

Akashavani Bhadravati ಆಕಾಶವಾಣಿಗೆ 90 ವರ್ಷ ತುಂಬುತ್ತಿದ್ದು, ದೇಶದ ಪ್ರಥಮ ಎಲೆಕ್ಟ್ರಾನಿಕ್ ಮಾಧ್ಯಮವಾಗಿ ಆರಂಭವಾದ ಆಕಾಶವಾಣಿ ಹತ್ತು ಹಲವು ಪ್ರತಿಭೆಗಳನ್ನು ಹೊರತಂದಿದೆ ಎಂದು ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್.ಭಟ್ ಹೇಳಿದರು.

ಆಕಾಶವಾಣಿಗೆ 90ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಆಕಾಶವಾಣಿ ಭದ್ರಾವತಿ ಹಾಗೂ ಕುವೆಂಪು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ “ಬಾನುಲಿ ಬರಹ” ವಿಶೇಷ ಕಾರ್ಯಾಗಾರದಲ್ಲಿ ಮಾತನಾಡಿ, ಪ್ರತಿ ದಿನ ವಿವಿಧ ರೀತಿಯ ಕಾರ್ಯಕ್ರಮ ನೀಡುತ್ತಿದೆ. ಪ್ರತಿಕೋದ್ಯಮದ ವಿದ್ಯಾರ್ಥಿಗಳು ಸಂಶೋಧಕರಾಗಿ ವಸ್ತುನಿಷ್ಟ ವರದಿ ಮಾಡಿದರೆ ಜನಮನಗೆಲ್ಲಲು ಸಾಧ್ಯ ಎಂದು ತಿಳಿಸಿದರು.

ಕುವೆಂಪು ವಿವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಸತೀಶ್ ಕುಮಾರ್ ಅಂಡಿಂಜಿ ಅವರು ಪತ್ರಿಕೆ ಮತ್ತು ಆಕಾಶವಾಣಿ ಬರಹದ ವ್ಯತ್ಯಾಸ ತಿಳಿಸುಸುವುದರೊಂದಿಗೆ ಆಕಾಶವಾಣಿ ನಿಖರ ಹಾಗೂ ಸತ್ಯನಿಷ್ಟೆಗೆ ಹೆಸರಾಗಿದೆ ಮತ್ತು ತನ್ನ ಬಾಲ್ಯದ ಗೆಳೆಯ ಆಕಾಶವಾಣಿ ಆಗಿತ್ತು ಎಂದರು.

ಆಕಾಶವಾಣಿಯ ತಾಂತ್ರಿಕ ವಿಭಾಗದ ಮುಖ್ಯಸ್ಥ ಎಸ್.ಎಸ್.ಕೃಷ್ಣಪ್ಪ ಮಾತನಾಡಿ, ಇಂದು ರೇಡಿಯೋ ಕೇವಲ ರೇಡಿಯೋದಲ್ಲಿ ಅಷ್ಟೇ ಅಲ್ಲದೆ ಮೊಬೈಲ್ ಆ್ಯಪ್ ಹಾಗು ಡಿಜಿಟಲ್ ಮಿಡಿಯಾದಲ್ಲಿ ಜಗತ್ತಿನಾದ್ಯಂತ ಕೇಳಬಹುದು ಎಂದರು.

ನಾಟಕ ರಚನೆ, ಉದ್ಘೋಷಕರ ಬರವಣಿಗೆ, ಕೃಷಿ ಬರವಣಿಗೆ, ಜಾನಪದ ಬರವಣಿಗೆ ಬಗ್ಗೆ ಎಂ.ಕೆ.ಶಿವಕುಮಾರ್, ಎಸ್.ಎಂ.ಸುಧಾಕರ್ ಹಾಗೂ ಜಾನಪದ ತಜ್ಞ ಬಸವರಾಜ ನೆಲ್ಲಿಸರ ಅವರು ಚರ್ಚಿಸಿದರು. ಜಿ ವಿಜಯಕುಮಾರ್ ಕೇಳುಗರ ಬರವಣಿಗೆ ಬಗ್ಗೆ ಮಾಹಿತಿ ನೀಡಿದರು.

Akashavani Bhadravati ಡಾ. ಬಸವರಾಜ ಗುಬ್ಬಿ ಅವರ ನಿರೂಪಣೆ ಹಾಗು ವಿದ್ಯಾದೇವಿ ಕಾರಂತ್ ಅವರು ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ಭದ್ರಾವತಿ ಹಾಗೂ ಚಿತ್ರದುರ್ಗ ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್.ಭಟ್ ಅಧ್ಯಕ್ಷತೆ ವಹಿಸಿದ್ದರು.

ಬಾನುಲಿ ನಾಟಕದದಲ್ಲಿ ಪಿ.ಹೆಚ್.ಡಿ ಪಡೆದಿರುವ ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥ ಡಾ. ಎನ್.ಸುಧೀಂದ್ರ ಅವರು ರೇಡಿಯೊ ನಾಟಕ ರಚನೆಯ ಮೂಲ ಪರಿಕರಗಳ ಬಗ್ಗೆ ಸೋದಾಹರಣ ಪರಿಚಯಿಸಿದರು.
ಕತೆ, ಪಾತ್ರಗಳು, ನಿರೂಪಣೆ,ಸನ್ನಿವೇಶಗಳ ಸಂಯೋಜನೆ,
ಸಾಮಾಜಿಕ ಸ್ವಾಸ್ಥ್ಯ ಕಲಕದ ರೀತಿಯ ಸಂಭಾಷಣೆ , ವಸ್ತು ಸಂಘರ್ಷದ ಬೆಳವಣಿಗೆಯ‌ ಮೂಲಕ ಕೇಳುಗರ ಆಸಕ್ತಿಯನ್ನ ,ಕಲ್ಪನಾ ಸಾಮರ್ಥ್ಯ ಬೆಳೆಸುತ್ತಾ ಸಾಗುವ ಬರಹ,ಶೈಲಿಯಿಂದ ರೇಡಿಯೊ ನಾಟಕ ಕೇಳುಗರ ಮನಸ್ಸಿನಾಳಕ್ಕೆ ಪರಿಣಾಮ ಬೀರುತ್ತದೆ ಎಂದರು.

ಹಿರಿಯ ಉದ್ಘೋಷಕ ಎಂ.ಕೆ.ಶಿವಕುಮಾರ್, ರೋಟರಿಯ ಜಿ.ವಿಜಯಕುಮಾರ್, ಡಾ. ಎಸ್.ಎಂ.ಸುಧಾಕರ್ ಅವರು ಬಾನುಲಿಯ ವಿವಿಧ ಪ್ರಕಾರದ ಬರವಣಿಗೆ ಬಗ್ಗೆ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar ರಾಜ್ಯದ ಎಲ್ಲಾ ಅಧಿಕಾರಿಗಳು “ಟೀಮ್ ಕರ್ನಾಟಕ” ಮನೋಭಾವದಿಂದ ಕಾರ್ಯನಿರ್ವಹಿಸಬೇಕು: ಡಿ.ಕೆ. ಶಿವಕುಮಾರ್

D.K. Shivakumar ರಾಜ್ಯದ ಅಭಿವೃದ್ಧಿ, ಭ್ರಷ್ಟಾಚಾರ ನಿರ್ಮೂಲನೆ, ಶಿಕ್ಷಣ, ಕಾನೂನು...

B.Y. Raghavendra ಕೆರೆ ಬಸವಣ್ಣ ಶೇಡಿನ ಕೆರೆ” ಲೋಕಾರ್ಪಣೆ!

B.Y. Raghavendra ಶ್ರೀ ಡಿ. ಯೇಸು ಪ್ರಕಾಶ್ ಅವರ ಸ್ಮರಣಾರ್ಥ, ಸಾರಾ...

Veerendra Heggade ಕೂಡ್ಲಿಯಲ್ಲಿ ಸಾಮಾಜಿಕಜಾಗೃತಿ ಮೂಡಿಸುವ ಬೀದಿ ನಾಟಕದ ಯಶಸ್ವಿ ಪ್ರದರ್ಶನ

Veerendra Heggade ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...