Friday, July 24, 2026
Friday, July 24, 2026

Information and Public Relations Department ಇಲಾಖೆಯ ಮಾಧ್ಯಮಪಟ್ಟಿಯಲ್ಲಿರುವ ಗ್ರಾಮೀಣ ಪತ್ರಕರ್ತರಿಗೆಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ಬಗ್ಗೆ ಪ್ರಕಟಣೆ.

Date:

Information and Public Relations Department ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ “ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ/ ಸ್ಥಾನಿಕ ಸಂಪಾದಕರ/ ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ https://sevasindhu.karnataka.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

2025ರ ಸೆಪ್ಟೆಂಬರ್ 12ರ ನಂತರ ಅರ್ಜಿಗಳನ್ನು ಸಲ್ಲಿಸಿದ್ದಲ್ಲಿ, ಮತ್ತೊಮ್ಮೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ. ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ಥಾನಿಕ ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ.

Information and Public Relations Department ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಸುದ್ದಿ ಸಂಗ್ರಹಿಸಲು ಅನುಕೂಲ ಕಲ್ಪಿಸಲು ಸರ್ಕಾರವು ವಾರ್ತಾ ಇಲಾಖೆಯ ಮೂಲಕ ಉಚಿತ ಬಸ್ ಪಾಸ್ ಗಳನ್ನು ನೀಡುತ್ತಿದೆ.

ರಾಜ್ಯದ ಎಲ್ಲಾ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ 2026 ರ ಜೂನ್ 20 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...