Wednesday, June 3, 2026
Wednesday, June 3, 2026

H.S. Sundaresh ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು- ಹೆಚ್.ಎಸ್.ಸುಂದರೇಶ್.

Date:

H.S. Sundaresh ಪ್ರತಿಯೊಬ್ಬ ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು. ರಕ್ತದಾನ ಮಾಡುವುದರಿಂದ ಸದೃಢ ಆರೋಗ್ಯ ನಮ್ಮದಾಗುತ್ತದೆ ಎಂದು ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು.

ಗೋಪಾಲಗೌಡ ಬಡಾವಣೆಯ ‘ಎ’ ಬ್ಲಾಕ್ ನಿವಾಸಿಗಳ ಸಂಘದ ವತಿಯಿಂದ ಆಯೋಜಿಸಿದ್ದ ಪುರಂದರ ಯೋಗ ಭವನ ಉದ್ಘಾಟನೆ, ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಆರೋಗ್ಯ ಜಾಗೃತಿ ಮೂಡಿಸಲು ಪೂರಕವಾದ ಭವನ ನಿರ್ಮಾಣ ಮಾಡಿರುವುದು ಶ್ಲಾಘನೀಯ. ಪ್ರತಿ ನಿತ್ಯ ಎಲ್ಲರೂ ಯೋಗಾಭ್ಯಾಸ ಮಾಡಬೇಕು. ಇದರಿಂದ ಮಾನಸಿಕ ನೆಮ್ಮದಿ ಲಭಿಸುತ್ತದೆ ಎಂದು ತಿಳಿಸಿದರು.

ಬಡಾವಣೆಯ ಸಂಘದ ಅಧ್ಯಕ್ಷ ಎಸ್.ಸಿ.ರಾಮಚಂದ್ರ ಮಾತನಾಡಿ, ಬಡಾವಣೆಯಲ್ಲಿ ಸಂಘ ರಚಿಸಿದ ನಂತರ ಬಡಾವಣೆಯ ಜನರಿಗೆ ಅನುಕೂಲವಾಗುವಂತೆ ಆರೋಗ್ಯದ ದೃಷ್ಟಿಯಿಂದ ಈ ಪಾರ್ಕ್ ನಿರ್ವಹಣೆಯನ್ನು ವಹಿಸಿಕೊಂಡು ಶಿವಮೊಗ್ಗದ ಮಾದರಿ ಪಾರ್ಕ್ ಆಗಿ ಮಾರ್ಪಡಿಸಲಾಗಿದೆ. ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವುದು ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ ಎಂದರು.

H.S. Sundaresh ಸುಬ್ಬಯ್ಯ ಆಸ್ಪತ್ರೆಯ ವೈದ್ಯ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು. ಪಿ.ರಾಜೇಶ್ ಮತ್ತು ವಿನಯ್ ರಕ್ತದಾನ ಮಾಡಿದರು. ಎನ್.ವಿ.ಭಟ್ ಕಾರ್ಯಕ್ರಮ ನಿರೂಪಿಸಿದರು. ಗಣೇಶ.ಹೆಚ್.ಎಸ್ ಸ್ವಾಗತಿಸಿದರು. ಪಂಚಾಕ್ಷರಯ್ಯ ಹೆಚ್ ವಂದನಾರ್ಪಣೆ ನಡೆಸಿಕೊಟ್ಟರು.

ಸಂಘದ ಗೌರವಾಧ್ಯಕ್ಷ ಆದಿಮೂರ್ತಿ, ಗಂಗಾಧರ್, ಎಂ.ಚAದ್ರಶೇಖರ್, ರವಿ, ತನು, ಗಣೇಶ್, ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ಬಿ.ಜಿ.ಧನರಾಜ್, ಪಂಚಾಕ್ಷರಯ್ಯ ಹಿರೇಮಠ್, ನಾರಾಯಣ್, ಸತೀಶ್, ಗೀತೇಂದ್ರ, ಮಂಜುನಾಥ್ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Tunga Reservoir ಅವಿರತ ಮಳೆ.ತುಂಗಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಸಾಧ್ಯತೆ. ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಮಾಹಿತಿ.

Tunga Reservoir ತುಂಗಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ...

Shivamogga Railway Station ಚಲಿಸುತ್ತಿದ್ದ ರೈಲುಬೋಗಿ ಹತ್ತುವ ಪ್ರಯತ್ನದಲ್ಲಿ ಆಯತಪ್ಪಿ ಬೀಳಲು ಬಿಡದೇ ಪ್ರಯಾಣಿಕರನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿ.

Shivamogga Railway Station ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದ ಪ್ರಯಾಣಿಕನನ್ನು ರೈಲ್ವೆ ಪೊಲೀಸರು...