Thursday, July 23, 2026
Thursday, July 23, 2026

S.N. Channabasappa ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಡಿಸಿಎಂ ಡಾ.ಜಿ.ಪರಮೇಶ್ವರ ಅವರ ನಾಯಕತ್ವದಲ್ಲಿ ರಾಜ್ಯ ಪ್ರಗತಿ ಪಥದಲ್ಲಿ ಮುನ್ನಡೆಯಲಿ- ಶಾಸಕ ಎಸ್.ಎನ್.ಚನ್ನಬಸಪ್ಪ

Date:

S.N. Channabasappa ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ. ಜಿ. ಪರಮೇಶ್ವರ್ ಅವರಿಗೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಸಭೆಯ ನಿಮಿತ್ತ ನಿನ್ನೆ ಸಂಜೆ ಬೆಂಗಳೂರಿನ ವಿಧಾನಸೌಧಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ಮಾನ್ಯ ಶಾಸಕರು ಗೌರವಾನ್ವಿತ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳನ್ನು ಭೇಟಿಯಾಗಿ ಹಾರ್ದಿಕ ಶುಭ ಹಾರೈಕೆಗಳನ್ನು ಸಲ್ಲಿಸಿದರು.

S.N. Channabasappa ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು, “ನೂತನ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಸುದೀರ್ಘ ಸಾರ್ವಜನಿಕ ಮತ್ತು ರಾಜಕೀಯ ಅನುಭವದ ಸಾರಥ್ಯದಲ್ಲಿ, ಮುಂಬರುವ ದಿನಗಳಲ್ಲಿ ನಮ್ಮ ಕರ್ನಾಟಕ ರಾಜ್ಯವು ಪ್ರಗತಿಯ ಪಥದಲ್ಲಿ ಮುನ್ನಡೆಯಲಿ ಎಂದು ಆಶಿಸುತ್ತೇನೆ. ಇದರೊಂದಿಗೆ, ಮಲೆನಾಡಿನ ಹೆಬ್ಬಾಗಿಲಾದ ಶಿವಮೊಗ್ಗ ನಗರದ ಜ್ವಲಂತ ಅಗತ್ಯತೆಗಳು ಹಾಗೂ ನಾಡಿನ ಸಮಸ್ತ ನಾಗರಿಕರ ಸರ್ವತೋಮುಖ ಕಲ್ಯಾಣಕ್ಕಾಗಿ, ಯಾವುದೇ ತಾರತಮ್ಯವಿಲ್ಲದ ಸಮಾನತೆಯ ಮತ್ತು ಪಾರದರ್ಶಕ ಶುದ್ಧ ಆಡಳಿತ ತತ್ತ್ವಗಳ ಅಡಿಯಲ್ಲಿ ತಾವೊಂದು ಹೊಸ ಭರವಸೆಯ ಮುನ್ನುಡಿ ಬರೆಯುವಿರೆಂದು ಬಯಸುತ್ತೇನೆ,” ಎಂದು ತಿಳಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...