ಇನ್ನೂ ನೂತನ ಸಚಿವ ಸಂಪುಟ ರೂಪುಗೊಂಡು ಕಾರ್ಯಶೀಲವಾಗುವ ಮುನ್ನವೇ ಸಚಿವರೊಬ್ಬರ ರಾಜೀನಾಮೆ ಕಾಂಗ್ರೆಸ್ ಪಕ್ಷದಲ್ಲಿನ ಪರಸ್ಪರ ತಪ್ಪುಗ್ರಹಿಕೆಗಳಿಗೆ ಉದಾಹರಣೆಯಾಗಿದೆ.
ಹಿರಯರಾದ ರಾಮಲಿಂಗಾರೆಡ್ಡಿ ಕಾಂಗ್ರೆಸ್ ಪಕ್ಷ ಆಡಳಿತ ಚುಕ್ಕಾಣಿ ಹಿಡಿದಾಗಲೆಲ್ಲ ಬಹುತೇಕ ಸಂಪುಟ ಸಚಿವರಾಗಿ ಅಧಿಕಾರದ ಸವಿಯುಂಡಿದ್ದಾರೆ.
ಈಗ ಜಲಸಂಪನ್ಮೂಲಖಾತೆ ಬೇಡವೇ ಬೇಡ. ಬೆಂಗಳೂರು ಅಭಿವೃದ್ಧಿ ಖಾತೆ ನೀಡಿ ಎಂದು ವರಾತ ಹಚ್ಚಿರುವುದು ಸುದ್ದಿಯಾಗಿದೆ. ಅಷ್ಟೇ ಅಲ್ಲ “ಆತ್ಮಸಾಕ್ಷಿ ವಿರುದ್ಧ ಕಾರ್ಯಶೀಲನಾಗಲು ಸಾಧ್ಯವಿಲ್ಲ ” ಎಂಬ ಕಾರಣ ನೀಡಿ ರಾಜೀನಾಮೆ ಪತ್ರವನ್ನೂ ರವಾನಿಸದ್ದಾರೆ .
ಮುಖ್ಯಮಂತ್ರಿ ಬದಲಾವಣೆಯಂತಹ ಸನ್ನಿವೇಶ ಬಹಳ ಸೂಕ್ಷ್ಮವಾಗಿದ್ದು ಇಡೀ ಕಾಂಗ್ರೆಸ್ ಪಕ್ಷ ಇದೀಗ ಹೌಹಾರುವಂತಾಗಿದೆ. ಏಕೆಂದರೆ ಹಿರಿಯ ರಾಜಕಾರಣಿ ಮತ್ತು ಸದಾ ಗೆಲ್ಲುತ್ತಲೇ ಬಂದ
ರಾಮಲಿಂಗಾರೆಡ್ಡಿ, ಉತ್ತಮ ಸಚಿವರಾಗಿಯೂ ಹೆಸರುಗಳಿಸಿದವರು.
ಆದರೆ ಈಗಿನ
ಪರಿಸ್ಥಿತಿಯಲ್ಲಿ ಪಕ್ಷದ ಹೈಕಮಾಂಡ್ ಕೂಡ ಕೊಂಚ ಗಡುಸಾಗಿಯೇ ಇದೆ.
ಮನವೊಲಿಸಿ.ಇಲ್ಲದಿದ್ದರೆ ರಾಜಿನಾಮೆ ಅಂಗೀಕರಿಸಿ ಎಂದು ಸೂಚನೆ ನೀಡಿರುವುದು ವರದಿಯಾಗಿದೆ.
ಇತ್ತ ಇನ್ನೋರ್ವ ಹಿರಿಯ ಸಚಿವ ಕೆ.ಹೆಚ್.ಮುನಿಯಪ್ಪ ಕೂಡ ತಮ್ಮ ಖಾತೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ.
ಒಟ್ಟಿನಲ್ಲಿ ವಿಪಕ್ಷಗಳಿಗೆ ಟೀಕಿಸಲು ಇದೊಂದು ಸಂದರ್ಭ ಒದಗಿಬಂದಿದೆ.
ರಾಹುಲ್ ಗಾಂಧಿ ಬೆಂಗಳೂರು ಭೇಟಿಗ ದಿನವೇ ರಾಜಿನಾಮೆ ಪ್ರಕರಣ ನಡೆದಿದೆ. ಕಡಕ್ ಆಗಿ ರಾಹುಲ್ ಏನು ನಿರ್ಣಯ ನೀಡುತ್ತಾರೋ ಕಾದು ನೋಡಬೇಕಿದೆ.
