Thursday, July 23, 2026
Thursday, July 23, 2026

Kannadasiri ವಿದೇಶ ಮತ್ತು ದಕ್ಷಿಣ ವಲಯ ಸಾಂಸ್ಕೃತಿಕ ಮೇಳಗಳಲ್ಲಿ ಭಾಗವಹಿಸಲು ಕಲಾವಿದರು& ಕಲಾತಂಡಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.

Date:

Kannadasiri ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ಐಸಿಸಿಆರ್) ಹಾಗೂ ಕರ್ನಾಟಕ ಸರ್ಕಾರದ ನಡುವಿನ ಒಡಂಬಡಿಕೆಯಂತೆ ವಿದೇಶಗಳಿಗೆ ಹಾಗೂ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರಗಳಿಗೆ ಕಲಾತಂಡಗಳನ್ನು ಕಳುಹಿಸಲು ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆಯ ಅರ್ಹ ಕಲಾವಿದರು ಮತ್ತು ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಸ್ಕೃತಿ, ಕಲೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮಾಡಿಕೊಳ್ಳಲಾಗಿರುವ ಈ ಒಡಂಬಡಿಕೆಯನ್ವಯ, ಐಸಿಸಿ ಆರ್ ಸಂಸ್ಥೆಯ ವತಿಯಿಂದ ರಾಜ್ಯ ಸರ್ಕಾರದ ಸಾಂಸ್ಕೃತಿಕ ಕಲಾತಂಡಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಿಗೆ ಕಳುಹಿಸಿಕೊಡಲಾಗುತ್ತದೆ. ಈ ಮೂಲಕ ಕಲಾತಂಡಗಳು ಹಾಗೂ ಕಲಾವಿದರನ್ನು ಎಂಪ್ಯಾನಲ್ ಮಾಡಿ ಅವರ ಪ್ರತಿಭೆಯನ್ನು ಹೆಚ್ಚು ಪ್ರಚುರಪಡಿಸಲು ಅವಕಾಶ ಕಲ್ಪಿಸಲಾಗುತ್ತಿದೆ.
ಆದ್ದರಿಂದ, ಜಿಲ್ಲೆಯಲ್ಲಿರುವ ಆಸಕ್ತ ಕಲಾವಿದರು ಹಾಗೂ ಕಲಾತಂಡಗಳು ನಿಗದಿತ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆಯಾ ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿಗೆ ದಿನಾಂಕ: 12.06.2026 ರೊಳಗಾಗಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕು.
Kannadasiri ಅರ್ಜಿ ನಮೂನೆಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ www.kannadasiri.karnataka.gov.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು‌
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶಿವಮೊಗ್ಗ ಜಿಲ್ಲಾ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ಪ್ರಕಟಣೆಯಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...