Tuesday, September 8, 2026
Tuesday, September 8, 2026

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Date:

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00 ರಿಂದ 5.00ರವರೆಗೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿರುವ ಬಂದಿ ಕಲಾವಿದರಿಂದ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಜೈಲು ಹಕ್ಕಿಗಳ ಗಾನಸುಧೆ ಎಂಬ ಶೀರ್ಷಿಕೆಯಡಿ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ.
ಅಪರಾಧವನ್ನು ದ್ವೇಷಿಸು, ಅಪರಾಧಿಯನ್ನಲ್ಲ ಎಂಬ ತತ್ವದಡಿಯಲ್ಲಿ ಬಂದಿಗಳ ಮನಃಪರಿವರ್ತನೆಗಾಗಿ ಸಕಾರಾತ್ಮಕ ಸುಧಾರಣೆಯೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಸೇರಿಸುವುದು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಧ್ಯೇಯವಾಗಿರುತ್ತದೆ. 20 ಜನ ಬಂದಿಗಳನ್ನು ಉತ್ತಮ ಹಾಡುಗಾರರೆಂದು ಗುರುತಿಸಿ ಹಾಡುಗಳನ್ನು ಹಾಡಲು ಅಕಾಶ ಕಲ್ಪಿಸಲಾಗಿದ್ದು, Akashavani Bhadravati ಹಾಡುಗಳೊಂದಿಗೆ ಅವರ ಬದುಕಿನ ಪರಿವರ್ತನ ಸನ್ನಿವೇಶಗಳನ್ನು ಮತ್ತು ಮುಕ್ತ ಮನಸ್ಸಿನ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ.
ಆಸಕ್ತ ಕೇಳುಗರು ತಮ್ಮ ಮೊಬೈಲ್‌ನಲ್ಲಿ “NEWS ON AIR APP” ಡೌನ್ಲೋಡ್ ಮಾಡಿಕೊಂಡು 103.5 MHz and 101.4 MHz Frequency ಇಲ್ಲಿ ಕಾರ್ಯಕ್ರಮವನ್ನು ಕೇಳಬಹುದಾಗಿರುತ್ತದೆ.
ಪ್ರಚಾರದ ಆಡಿಯೋ ಲಿಂಕ್ https://www.image2url.com/r2/default/audio/1780556525429-149a6f75-62fb-4bf0-b385-3f0f40966105.mp3
ಸಾರ್ವಜನಿಕರು ಈ ಕಾರ್ಯಕ್ರಮವನ್ನು ಕೇಳಿ, ಆನಂದಿಸಿ, ಪ್ರೋತ್ಸಾಹಿಸುವಂತೆ ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...