Monday, July 13, 2026
Monday, July 13, 2026

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Date:

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00 ರಿಂದ 5.00ರವರೆಗೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿರುವ ಬಂದಿ ಕಲಾವಿದರಿಂದ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಜೈಲು ಹಕ್ಕಿಗಳ ಗಾನಸುಧೆ ಎಂಬ ಶೀರ್ಷಿಕೆಯಡಿ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ.
ಅಪರಾಧವನ್ನು ದ್ವೇಷಿಸು, ಅಪರಾಧಿಯನ್ನಲ್ಲ ಎಂಬ ತತ್ವದಡಿಯಲ್ಲಿ ಬಂದಿಗಳ ಮನಃಪರಿವರ್ತನೆಗಾಗಿ ಸಕಾರಾತ್ಮಕ ಸುಧಾರಣೆಯೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಸೇರಿಸುವುದು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಧ್ಯೇಯವಾಗಿರುತ್ತದೆ. 20 ಜನ ಬಂದಿಗಳನ್ನು ಉತ್ತಮ ಹಾಡುಗಾರರೆಂದು ಗುರುತಿಸಿ ಹಾಡುಗಳನ್ನು ಹಾಡಲು ಅಕಾಶ ಕಲ್ಪಿಸಲಾಗಿದ್ದು, Akashavani Bhadravati ಹಾಡುಗಳೊಂದಿಗೆ ಅವರ ಬದುಕಿನ ಪರಿವರ್ತನ ಸನ್ನಿವೇಶಗಳನ್ನು ಮತ್ತು ಮುಕ್ತ ಮನಸ್ಸಿನ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ.
ಆಸಕ್ತ ಕೇಳುಗರು ತಮ್ಮ ಮೊಬೈಲ್‌ನಲ್ಲಿ “NEWS ON AIR APP” ಡೌನ್ಲೋಡ್ ಮಾಡಿಕೊಂಡು 103.5 MHz and 101.4 MHz Frequency ಇಲ್ಲಿ ಕಾರ್ಯಕ್ರಮವನ್ನು ಕೇಳಬಹುದಾಗಿರುತ್ತದೆ.
ಪ್ರಚಾರದ ಆಡಿಯೋ ಲಿಂಕ್ https://www.image2url.com/r2/default/audio/1780556525429-149a6f75-62fb-4bf0-b385-3f0f40966105.mp3
ಸಾರ್ವಜನಿಕರು ಈ ಕಾರ್ಯಕ್ರಮವನ್ನು ಕೇಳಿ, ಆನಂದಿಸಿ, ಪ್ರೋತ್ಸಾಹಿಸುವಂತೆ ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಕೆರೆ ತುಂಬಿಸಿದ ಏತ ನೀರಾವರಿ: ಉಡುಗಣಿ- ತಾಳಗುಂದ- ಹೊಸೂರು ಗ್ರಾಮಸ್ಥರ ಕಣ್ಣಲ್ಲಿ ಆನಂದ ಭಾಷ್ಪ

B. Y. Raghavendra ಶಿಕಾರಿಪುರ ತಾಲೂಕಿನ ಕೃಷಿ ರಂಗದ ಇತಿಹಾಸದಲ್ಲೇ ಅತ್ಯಂತ...

U.T. Khader ತೀರ್ಥಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಸಚಿವ ಖಾದರ್ ಭೇಟಿ: ಪ್ರತೀ ವಾರ್ಡಿನ ರೋಗಿಗಳೊಂದಿಗೆ ಕ್ಷೇಮ ವಿಚಾರಣೆ

U.T. Khader ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಆರೋಗ್ಯ...

Klive Special Article ಸಕಲ ವಿದ್ಯಾಸಂಪನ್ನ, ಮಹಾಮಹಿಮ ಶ್ರೀವಿಜಯೀಂದ್ರ ತೀರ್ಥರು. ...

ದಿನದ ಒಳ್ಳೆಯಮಾತು(ಯತಿಗಳ ಸ್ಮರಣೆ) ವಿಜಯೀಂದ್ರತೀರ್ಥ ಗುರುಸಾರ್ವಭೌಮರು Klive Special Article ಶ್ರೀವಿಜಯೀಂದ್ರತೀರ್ಥಗುರುಗಳು ಕಲಿಯುಗ ಕಲ್ಪತರು...