Shimoga News ಶಿವಮೊಗ್ಗದ ತೃಪ್ತಿ ಹೆಲ್ತ್ ಕೇರ್ ಆಶ್ರಯದಲ್ಲಿ ಭಾವಸಾರ ವಿಜನ್ ಇಂಡಿಯ ವೈಭವ್ ಸೀನಿಯರ್ ಸಿಟಿಜನ್ ಸಮಾಜದವರಿಗೆ ಉಚಿತ ಮೂತ್ರ ರೋಗ, ಮೂತ್ರಕೋಶ ತಪಾಸಣೆ ಮತ್ತು ಮಾಹಿತಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮೂತ್ರ ರೋಗ ತಜ್ಞ ಡಾ| ಚಂದ್ರ ಶೇಖರ್ ಅವರು, ಆರೋ ಗ್ಯವೇ ಭಾಗ್ಯ, ಆರೋಗ್ಯವಿಲ್ಲದಿದ್ದರೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಆದ್ದರಿಂದ ಪ್ರತಿಯೊಬ್ಬರು ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕು ಎಂದರು.
Shimoga News ಶಿವಮೊಗ್ಗದ ದುರ್ಗೀಗುಡಿ ಯಲ್ಲಿರುವ ನಮ್ಮ ಸೆಂಟರ್ನಲ್ಲಿ ಆರ್ಥಿಕವಾಗಿ ಸಂಕಷ್ಠದಲ್ಲಿರುವವರಿಗೆ ಮತ್ತು ಹಲವಾರು ಸಂಘ ಸಂಸ್ಥೆಗಳಿಗೆ ಉಚಿತವಾಗಿ ಮೂತ್ರ ರೋಗ, ಬಿ.ಪಿ. ಕಿಡ್ನಿ, ಮಧುಮೇಹ ಮತ್ತಿತರ ತಪಾಸಣೆಗಳನ್ನು ನಡೆಸಲಾಗುತ್ತಿದ್ದು, ರೋಗಿಗಳು ಇದರ ಸದುಪಯೋಗ ಪಡೆಯಲು ತಿಳಿಸಿದರು. ತಪಾಸಣೆಯಲ್ಲಿ 26ಕ್ಕೂ ಹೆಚ್ಚು ಜನರು ಇದರ ಪ್ರಯೋಜನ ಪಡೆದರು.
ಆಸ್ಪತ್ರೆ ಪ್ರಾರಂಭವಾದಾಗಿನಿಂದ ಇದುವರೆಗೆ 2224ಕ್ಕೂ ಹೆಚ್ಚು ಜನರು ಇದರ ಪ್ರಯೋಜನ ಪಡೆದರು. ಹೆಲ್ತ್ ಕೇರ್ನ ರಜಿನಿ, -ಸುಶ್ಮಾ, ರಕ್ಷಿತಾ ಅವರು ಕಾರ್ಯಕ್ರಮ ನಡೆಸಿಕೊಟ್ಟರು.
