Monday, June 8, 2026
Monday, June 8, 2026

ಧರ್ಮ,ಸಂಸ್ಕೃತಿ , ಸಂಪ್ರದಾಯ ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು- ಸೀಮಾ ಸದಾನಂದ

Date:

ದೈವಜ್ಞ ಮಹಿಳಾ ಮಂಡಳಿಯು ನಿರಂತರ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ವಿಶೇಷ ಕೆಲಸ ಮಾಡುತ್ತಿದೆ ಎಂದು ದೈವಜ್ಞ ಮಹಿಳಾ ಮಂಡಳಿ ಅಧ್ಯಕ್ಷೆ ಸೀಮಾ ಸದಾನಂದ ಹೇಳಿದರು.
ದೈವಜ್ಞ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಮಾತನಾಡಿ, 30 ವರ್ಷಗಳಿಂದ ಸೃಜನಾತ್ಮಕ, ಕ್ರಿಯಾಶೀಲತೆಯ ಕೆಲಸಗಳನ್ನು ಮಾಡುತ್ತಿದೆ ಎಂದರು.
ಶ್ರೀನಿವಾಸ ಕಲ್ಯಾಣ ಮಾಡುವುದರಿಂದ ದಂಪತಿಗಳ ಜೀವನದಲ್ಲಿ ಸುಖ ಸಂತೋಷ ಪ್ರಾಪ್ತಿಯಾಗಿ ಸಂತೋಷ ಉಲ್ಲಾಸದಿಂದ ಇರುತ್ತಾರೆ. ನಮ್ಮ ಧಾರ್ಮಿಕ ನಂಬಿಕೆಗಳನ್ನು ಪಾಲಿಸುವುದರಿಂದ ಮನಸ್ಸು ಉಲ್ಲಸಿತವಾಗಿ ನೆಮ್ಮದಿಯಿಂದ ಜೀವನ ನಡೆಸಬಹುದು. ಧರ್ಮ ಸಂಸ್ಕೃತಿ ಸಂಪ್ರದಾಯ ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದು ತಿಳಿಸಿದರು.
ಕಾರ್ಯದರ್ಶಿ ವಾಣಿ ಪ್ರವೀಣ್ ಮಾತನಾಡಿ, ಶ್ರೀನಿವಾಸ ಕಲ್ಯಾಣದಿಂದ ಮನಸ್ಸಿಗೆ ಶಾಂತಿ, ಆತ್ಮ ತೃಪ್ತಿ ದೈವ ಭಕ್ತಿಯ ಜೊತೆಗೆ ಕುಟುಂಬದ ಎಲ್ಲರಿಗೂ ಒಳಿತಾಗುತ್ತದೆ. ಪ್ರತಿ ವರ್ಷ ಈ ರೀತಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಪ್ರೇಮ ರಮೇಶ್, ಅರ್ಚನಾ ಅಣ್ಣಪ್ಪ, ಸಹ ಕಾರ್ಯದರ್ಶಿ ಸುಧಾ ಸುರೇಶ್, ಚೇತನಾ ವಾದಿರಾಜ್, ಖಜಾಂಚಿ ರೂಪ ರವಿಪ್ರಕಾಶ್ ಮತ್ತು ದೈವಜ್ಞ ಬ್ರಾಹ್ಮಣ ಸಮಾಜದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ, ಇತರೆ ಎಲ್ಲಾ ದೈವಜ್ಞ ಸಮಾಜದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯವರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಉಪಸ್ಥಿತರಿದ್ದರು. ದೇವತಾ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಆಡಳಿತ ಮಂಡಳಿ, ನಿರ್ದೇಶಕರು, ಮಾಜಿ ಅಧ್ಯಕ್ಷರು, ಸದಸ್ಯರೆಲ್ಲರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪ್ರತೀ ಮನೆಯ ಮುಂದೆ ಸಸಿ ನೆಡುವ ಅಪೂರ್ವ ಸಂಕಲ್ಪ, ನಿವಾಸಿಗಳ ಪ್ರಯತ್ನ ಶ್ಲಾಘನೀಯ- ಬಿ.ವೈ.ರಾಘವೇಂದ್ರ

B.Y. Raghavendra ಹಸಿರು ಶಿವಮೊಗ್ಗ ಮತ್ತು ಸುಸ್ಥಿರ ಪರಿಸರದ ಆಶಯದೊಂದಿಗೆ, ಪಶು...

Bharat Scouts and Guides ಮಕ್ಕಳ ಆಸಕ್ತಿಗೆ ಅನುಗುಣ ಅವರ ಕಲಿಕೆಯನ್ನ ಪ್ರೋತ್ಸಾಹಿಸಬೇಕು- ಶಕುಂತಲಾ ಚಂದ್ರಶೇಖರ್

Bharat Scouts and Guides ಮಕ್ಕಳ ಆಸಕ್ತಿಗನುಗುಣವಾಗಿ ಅವರ ಕಲಿಕೆಯನ್ನು ಉತ್ತಮ...

Rotary Shimoga ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ನಿರ್ಲಕ್ಷ್ಯ – ಎಂ.ಎನ್.ಸುಂದರ ರಾಜ್

Rotary Shimoga ನಾಡಿನ ಆದಾಯದ ಮೂಲ ಆಗಬೇಕಿದ್ದ ಪ್ರವಾಸೋದ್ಯಮ ನಿರ್ಲಕ್ಷ್ಯಕ್ಕೆ...

World Environment Day ಶಿವಮೊಗ್ಗದಲ್ಲಿ ಗಮನ ಸೆಳೆದ ವಿಶಿಷ್ಟ ರೀತಿಯ “ಪರಿಸರ ದಿನಾಚರಣೆ”

ದಿನಾಂಕ ೦೫.೦೬.೨೦೨೬ ರಂದು ಶುಕ್ರವಾರ ಬೆಳಿಗ್ಗೆ ೮ ಗಂಟೆಗೆ ಶಿವಮೊಗ್ಗರಾಜೇಂದ್ರನಗರ ಬಡಾವಣೆಯ...