Monday, July 27, 2026
Monday, July 27, 2026

S.N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳ ರಸ್ತೆ, ಯುಜಿಡಿ ಕಾಮಗಾರಿಗಳನ್ನ ನಿಗದಿತ ಕಾಲಮಿತಿಯಲ್ಲಿ ಮುಗಿಸಿ- ಎಸ್.ಎನ್.ಚನ್ನಬಸಪ್ಪ.

Date:

S.N. Channabasappa ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ರಸ್ತೆ ಮತ್ತು ಯುಜಿಡಿ (UGD) ಕಾಮಗಾರಿಗಳಿಗೆ ಶಾಸಕ ಶ್ರೀ ಎಸ್.ಎನ್. ಚನ್ನಬಸಪ್ಪ ಚಾಲನೆ; ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದ ಕೆಲಸ ಮುಗಿಸಲು ಕಟ್ಟುನಿಟ್ಟಿನ ಸೂಚನೆ.

ಶಿವಮೊಗ್ಗ: “ಶಿವಮೊಗ್ಗ ನಗರದ ಪ್ರತಿಯೊಂದು ಬಡಾವಣೆಗೂ ನಾಗರಿಕ ಮೂಲಸೌಕರ್ಯಗಳನ್ನು ಒದಗಿಸಿ, ನಗರವನ್ನು ಸುಸಜ್ಜಿತ ಹಾಗೂ ಮಾದರಿಯನ್ನಾಗಿ ರೂಪಿಸುವುದೇ ನಮ್ಮ ಪ್ರಮುಖ ಆದ್ಯತೆಯಾಗಿದೆ,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.

ನಗರದ ಸರ್ವಾಂಗೀಣ ಪ್ರಗತಿಯ ಸಂಕಲ್ಪದೊಂದಿಗೆ ಇಂದು ಬೆಳಿಗ್ಗೆ ಶಾಸಕರು ಕ್ಷೇತ್ರದ ವ್ಯಾಪ್ತಿಯ ವಿವಿಧ ಪ್ರಮುಖ ಬಡಾವಣೆಗಳಾದ ಅಶ್ವತ್ ನಗರ, ಎಲ್.ಬಿ.ಎಸ್. ನಗರ, ಜೆ.ಎಚ್. ಪಟೇಲ್ ಬಡಾವಣೆ ಹಾಗೂ ನವನಗರ ಬಡಾವಣೆಗಳಲ್ಲಿ ನೂತನ ರಸ್ತೆ ನಿರ್ಮಾಣ ಮತ್ತು ಒಳಚರಂಡಿ (UGD) ಕಾಮಗಾರಿಗಳಿಗೆ ಶಾಸ್ತ್ರೋಕ್ತವಾಗಿ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

S.N. Channabasappa ಬಳಿಕ ಮಾಹಿತಿ ಹಂಚಿಕೊಂಡ ಶಾಸಕರು, “ಬಡಾವಣೆಗಳಲ್ಲಿ ವಾಸಿಸುವ ನಾಗರಿಕರಿಗೆ ಸುಗಮ ಸಂಪರ್ಕ ಕಲ್ಪಿಸುವ ರಸ್ತೆಗಳು ಮತ್ತು ವೈಜ್ಞಾನಿಕ ಹಂತದ ಒಳಚರಂಡಿ ವ್ಯವಸ್ಥೆಯನ್ನು ಒದಗಿಸುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಇಂದಿನಿಂದಲೇ ಕೆಲಸಗಳು ಆರಂಭಗೊಳ್ಳಲಿವೆ. ಕಾಮಗಾರಿಗಳ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಯೋಜನೆಗಳನ್ನು ಯಾವುದೇ ವಿಳಂಬವಿಲ್ಲದೆ, ಗುಣಮಟ್ಟದೊಂದಿಗೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಲಾಖೆಯ ಎಂಜಿನಿಯರ್‌ಗಳು ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ,” ಎಂದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಪಕ್ಷದ ಪದಾಧಿಕಾರಿಗಳು ಹಾಗೂ ಬಡಾವಣೆಯ ನಾಗರಿಕ ಬಂಧುಗಳು ಉಪಸ್ಥಿತರಿದ್ದು ಹರಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prahlad Joshi ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದೀ ಕರ್ತವ್ಯ ಸ್ವೀಕರಿಸುತ್ತಿದ್ದೇನೆ- ಪ್ರಹ್ಲಾದ ಜೋಷಿ.

Prahlad Joshi ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವರಾಗಿ ಶ್ರೀ ಪ್ರಹ್ಲಾದ...

Samarth Ramdas”ಸಾತ್ವಿಕ ಹೃದಯಿ” ಸಮರ್ಥ ರಾಮದಾಸರು. ಲೇ; ಪ್ರಸಾದ್ ಶ್ರೀವತ್ಸ, ದಾವಣಗೆರೆ.

Samarth Ramdas ಜಾಂಬ ಎಂಬ ಪುಟ್ಟ ಹಳ್ಳಿ ಔರಂಗಾಬಾದ್‌ ಜಿಲ್ಲೆಯಲ್ಲಿದೆ. ಅಲ್ಲಿ...

K.S.Eshwarappa ಕನಕರ ಸ್ಥಳಮಾಹಿತಿ ಉತ್ಖನನ ಕಾರ್ಯ ಅರ್ಥಪೂರ್ಣ. ಇಂತಹ ಸಂಶೋಧನೆಗಳಿಗೆ ನನ್ನ ಬೆಂಬಲವಿದೆ – ಕೆ.ಎಸ್.ಈಶ್ವರಪ್ಪ.

K.S.Eshwarappa ಪ್ರಸ್ತುತ ಸಮಾಜದಲ್ಲಿ ಇತಿಹಾಸ ಪ್ರಜ್ಞೆ ಕೊರತೆಯಿದೆ. ಇಂತಹಸನ್ನಿವೇಶದಲ್ಲಿ ಇತಿಹಾಸ ಪ್ರಾಧ್ಯಾಪಕ,...

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜಿನಾಮೆ,ಕೇವಲ ನೈತಿಕ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೆ- ವಸಂತಕುಮಾರ್.

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಕೇವಲ ನೈತಿಕತೆಯ ಜವಾಬ್ದಾರಿ ಎತ್ತಿ...