ಡಾ.ಡಿ.ವಿ.ಗುರುಪ್ರಸಾದ್ ಇವರ ಪುಸ್ತಕ ಪಾಕ್ ನಲ್ಲಿ ನಮ್ಮ ಧುರಂಧರರು ಪುಸ್ತಕ ಬಿಡುಗಡೆ ಕಾರ್ಯಕ್ರಮ ಜೂ. 13ರ ಶನಿವಾರ ಸಂಜೆ 05:30ಕ್ಕೆ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಹಾಲ್ನಲ್ಲಿ ಆಯೋಜನೆಗೊಂಡಿದೆ.
ಪ್ರಜ್ಞಾ ಪುಸ್ತಕ ಮಳಿಗೆ ಸಹಯೋಗದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಲೇಖಕ ವಿಶ್ರಾಂತ ಡಿಐಜಿ ಡಾ.ಡಿ.ವಿ.ಗುರುಪ್ರಸಾದ್ ಪಾಲ್ಗೊಂಡು ಕೃತಿ ಕುರಿತು ಮಾತನಾಡಲಿದ್ದಾರೆ.
1976ರಲ್ಲಿ ಪೊಲೀಸ್ ಸೇವೆಗೆ ಸೇರಿದ ಗುರು ಪ್ರಸಾದ್, 2011ರಲ್ಲಿ ಡಿಐಜಿ ಆಗಿ ನಿವೃತ್ತ ರಾಗುವ ಮುಂಚೆ ಮೂರು ಅತಿ ಸೂಕ್ಷ್ಮ ಜಿಲ್ಲೆಗಳ ವರಿಷ್ಠಾಧಿಕಾರಿಗಳಾಗಿ ಅಲ್ಲದೆ ಹುಬ್ಬಳ್ಳಿ- ಧಾರವಾಡ ಕಮಿಷನರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.
ಭಾರತ ಸರ್ಕಾರದ ಸಿಐಎಸ್ಎ- ಹಾಗೂ ರಾಜ್ಯ ಸಿಐಡಿ ಮತ್ತು ಇಂಟೆಲಿಜೆನ್ಸ್ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ ವಾರ್ತಾ ಮತ್ತು ಪ್ರಚಾರ ಇಲಾಖೆಯ ನಿರ್ದೇಶಕರಾಗಿ ಹಾಗೂ ರಾಜ್ಯ ಸಾರಿಗೆ ಸಂಸ್ಥೆಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಿಐಡಿ ವಿಭಾಗದ ಡಿಜಿಪಿ ಆಗಿಯೂ ಇವರು ಕಾರ್ಯನಿರ್ವಹಿಸಿ, ಹಲವು ಅಪರಾಧಗಳ ತನಿಖೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಇಂಗ್ಲೆಂಡ್ ಮತ್ತು ಇಸ್ರೇಲ್ ನಲ್ಲಿ ಸುರಕ್ಷತೆ ಮತ್ತು ತನಿಖೆ ತಂತ್ರಗಳ ಬಗ್ಗೆ ವಿಶೇಷ ತರಬೇತಿ ಪಡೆದಿರುತ್ತಾರೆ.
ಇಲಾಖೆಯಲ್ಲಿ ಯೂನಿಸೆ- ಸಹಕಾರದೊಂದಿಗೆ ಲಿಂಗಸೂಕ್ಮ್ಮತೆ ಬಗ್ಗೆ ಕಾರ್ಯನಿರ್ವಹಿಸಿದ್ದಾರೆ.
ಹಲವು ಉನ್ನತ ಸಂಸ್ಥೆಗಳಿಗೆ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಇವರು ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳಿಗೆ ತರಬೇತಿ ನೀಡಿ ಕಳೆದ ಎಂಟು ವರ್ಷಗಳಲ್ಲಿ 40 ಕ್ಕೂ ಹೆಚ್ಚು ಆಕಾಂಕ್ಷಿಗಳು ಯಶಸ್ವಿಯಾಗಿ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಸಾವಿರಾರು ಲೇಖನಗಳು ಮಾಯನಗರಿ ಪುಸ್ತಕಕ್ಕೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಮಾತ್ರವಲ್ಲದೆ ಹಲವು ಸಾಹಿತ್ಯ ಹಬ್ಬಗಳಲ್ಲಿ ಮುಖ್ಯ ಉಪನ್ಯಾಸಕರಾಗಿ ಹಲವು ವಿಚಾರಗಳನ್ನು ಮಂಡಿಸಿದ್ದಾರೆ. ಪ್ರವಾಸ ಇವರ ಮುಖ್ಯ ಹವ್ಯಾಸವಾಗಿದ್ದು 55ಕ್ಕೂ ಹೆಚ್ಚು ದೇಶಗಳಿಗೆ ಪ್ರವಾಸ ಮಾಡಿದ್ದಾರೆ. ತಮ್ಮ 35 ವರ್ಷಗಳ ಅನನ್ಯಸೇವೆಗಾಗಿ ರಾಷ್ಟçಪತಿಗಳ ಪದಕ ಕೂಡ ಪಡೆದುಕೊಂಡಿದ್ದಾರೆ.
ನೂರಾರು ಪುಸ್ತಕಗಳನ್ನು ರಚಿಸಿರುವ ಇವರಿಗೆ ಮಾಯಣ್ಣನ ಮಹಾನಗರಿ ಪುಸ್ತಕಕ್ಕೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.
ಡಿ. ವಿ. ಗುರಪ್ರಸಾದ್ರವರು ಸಾಹಿತ್ಯ ಹಬ್ಬಗಳಲ್ಲಿ, ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ, ವಿಷಯ ಮಂಡಿಸಿ ಗಮನ ಸೆಳೆದಿದ್ದಾರೆ. ವಿಶೇಷವಾಗಿ ಶಾಲಾ ಕಾಲೇಜು ಮಕ್ಕಳಿಗೆ ಸೂರ್ತಿದಾಯಕ ಉಪನ್ಯಾಸ ನೀಡುವಲ್ಲಿಯೂ ನಿರತರಾಗಿದ್ದಾರೆ.
ಅಪರೂಪದ ಈ ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಲಾಗಿದ್ದು ಮಾಹಿತಿಗಾಗಿ 9449284495, 9845014229, 95380 20367ರಲ್ಲಿ ಸಂಪರ್ಕಿಸಬಹುದು.
