Wednesday, August 5, 2026
Wednesday, August 5, 2026

ಸೊರಬದ ಕುಂಟಗಳಲೆ ಅರಣ್ಯದಲ್ಲಿ ಚಿರತೆ ಸಾವು: ವಿದ್ಯುತ್ ಹರಿಸಿ ಕೊಂದಿರುವ ಶಂಕೆ

Date:

ಸೊರಬ ತಾಲ್ಲೂಕು ಚಂದ್ರಗುತ್ತಿ ಹೋಬಳಿ ಕುಂಟಗಳಲೆ ಅರಣ್ಯದಲ್ಲಿ ಸುಮಾರು ೧೦ ವರ್ಷ ಪ್ರಾಯದ ಚಿರತೆಯೊಂದು ಅಸು ನೀಗಿದೆ. ಬಹುಷಃ ವಿದ್ಯುತ್ ಹರಿಸಿ ಕೊಲ್ಲಲಾಗಿದೆ ಎಂದು ಆರೋಪ ಕೇಳಿ ಬರುತ್ತಿದ್ದು ಅರಣ್ಯ ಇಲಾಖೆಯವರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ. ಈ ಭಾಗದಲ್ಲಿ ಈ ಹಿಂದೆ ಕಾಡುಕೋಣಗಳ, ಕಡವೆ, ಜಿಂಕೆಗಳ ಸಾವು ಕಾಣಿಸಿದ್ದು ಎಲ್ಲವನ್ನೂ ವಿದ್ಯುತ್ ಹರಿಸಿ ಕೊಲ್ಲಲಾಗಿದೆ ಎಂದು ಸ್ಥಳೀಯರು ಅನುಮಾನಿಸಿದ್ದಾರೆ. ಕಾಡು ಪ್ರಾಣಿಗಳನ್ನು ಕೊಂದು ಮಾರುವ ಜಾಲವೊಂದು ಈ ಭಾಗದಲ್ಲಿದ್ದು ಪ್ರಭಾವಿಗಳಿಂದಾಗಿ ಬೆಳಕಿಗೆ ಬರುತ್ತಿಲ್ಲ. ಅರಣ್ಯ ಇಲಾಖೆಯವರಿಗೆ ತಿಳಿದಿದ್ದರೂ ಹತಾಶೆಯಿಂದ ಕೈಚೆಲ್ಲಿಕುಳಿತಿದ್ದಾರೆಯೆ, ಪ್ರಾಣಿ ಹತ್ಯೆಗೆ ಕಡಿವಾಣ ಇಲ್ಲವೇ ಎಂಬ ಆತಂಕ ಸ್ಥಳೀಯರದ್ದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga “ಭಾರತ್ ಜೋಡೋ” ಯೋಜನೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ: ಪ್ರಭುಲಿಂಗ ಕವಳಿಕಟ್ಟಿ

DC Shivamogga ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ-ಸಾಮಾಜಿಕ...

B.Y. Raghavendra ಕೇಂದ್ರದ ಅಟಲ್ ಪಿಂಚಣಿ ಯೋಜನೆಗೆಶಿವಮೊಗ್ಗ ಜಿಲ್ಲೆಯಲ್ಲಿ ಗಮನಾರ್ಹ ಸ್ಪಂದನ- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ಅಸಂಘಟಿತ ವಲಯದಲ್ಲಿ ದುಡಿಯುವ ಲಕ್ಷಾಂತರ ಕಾರ್ಮಿಕರಿಗೂ ವೃದ್ಧಾಪ್ಯದಲ್ಲಿ ಆರ್ಥಿಕ...

S. N. Channabasappa ಶಿವಮೊಗ್ಗ ಸಾಂಸ್ಕೃತಿಕ ರಾಜಧಾನಿ ಎಂಬ ಪ್ರಸಿದ್ಧಿಗೆ ಇಲ್ಲಿನ ಸಹೃದಯರೇ ಕಾರಣ- ಕಾ.ವೆಂ‌.ಶ್ರೀ.

S. N. Channabasappa "ಶಿವಮೊಗ್ಗ ನಗರದ ಜೀವನಾಡಿ ಹಾಗೂ ಸಮೃದ್ಧಿಯ ಸಂಕೇತವಾಗಿ...